
ಮಂಗಳೂರು, ಆಗಸ್ಟ್.08: ಉಚ್ಚನ್ಯಾಯಾಲಯದ ಆದೇಶದಂತೆ ರಾಷ್ಟ್ರಧ್ವಜದ ಅವಮಾನವನ್ನು ತಡೆಯಲು ಹಾಗೂ ರಾಜ್ಯ ಸರ್ಕಾರದಿಂದ ಪ್ಲಾಸ್ಟಿಕ್ ಮೇಲಿನ ನಿರ್ಬಂಧದ ನಿರ್ಣಯದ ಕುರಿತು ಕ್ರಮಕೈಗೊಳ್ಳುವ ಕುರಿತು ದ.ಕ ಜಿಲ್ಲಾಧಿಕಾರಿಗಳ ಕಛೇರಿ, ಪೊಲೀಸ್ ಆಯುಕ್ತರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.
ಮನವಿಯಲ್ಲಿ ಈ ಕೆಳಗಿನಂತೆ ವಿನಂತಿಸಲಾಗಿದೆ :
ರಾಷ್ಟ್ರಧ್ವಜವು ರಾಷ್ಟ್ರದ ಗೌರವವಾಗಿದೆ! ಆದರೆ ದುರ್ದೈವದಿಂದ ಹೆಚ್ಚಿನ ಭಾರತೀಯರಿಗೆ ಇದರ ನೆನಪು ಕೇವಲ 15 ಅಗಸ್ಟ್ ಮತ್ತು 26 ಜನವರಿಯಂದು ಮಾತ್ರ ಆಗುತ್ತದೆ. ಈ ದಿನದಂದು ರಾಷ್ಟ್ರಧ್ವಜವನ್ನು ಅತ್ಯಂತ ಗೌರವದಿಂದ ಹಾರಿಸಲಾಗುತ್ತದೆ ! ಆದರೆ ಇದೇ ಕಾಗದದಿಂದ / ಪ್ಲಾಸ್ಟಿಕ್ ನಿಂದ ತಯಾರಿಸಿದ ರಾಷ್ಟ್ರಧ್ವಜವು ಸಂಜೆಯಾಗುತ್ತಿದ್ದಂತೆ ರಸ್ತೆಯ ಮೇಲೆ, ಕಸದ ಬುಟ್ಟಿಯಲ್ಲಿ, ಚರಂಡಿಯಲ್ಲಿ ಇತ್ಯಾದಿ ಸ್ಥಳದಲ್ಲಿ ಬಿದ್ದಿರುವುದನ್ನು ಕಾಣುತ್ತೇವೆ. ಪ್ಲಾಸ್ಟಿಕನಿಂದ ತಯಾರಾದ ರಾಷ್ಟ್ರಧ್ವಜವಂತೂ ನಾಶವೂ ಆಗುವುದಿಲ್ಲ, ಇದರಿಂದ ಹಲವು ದಿನಗಳವರೆಗೆ ನಮಗೆ ಆ ರಾಷ್ಟ್ರಧ್ವಜದ ಅಗೌರವವನ್ನು ನೋಡಬೇಕಾಗುತ್ತದೆ.
ರಾಷ್ಟ್ರಧ್ವಜದ ಈ ರೀತಿಯಲ್ಲಾಗುವ ಅಗೌರವವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮುಂಬೈ ಉಚ್ಚನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿಯ ದಾವೆಯನ್ನು (ದಾವೆ ಸಂ. 103/2011) ಹೂಡಲಾಗಿದೆ. ಇದರ ಬಗ್ಗೆ ಆಲಿಕೆಯನ್ನು ಮಾಡುತ್ತ ನ್ಯಾಯಾಲಯವು ಪ್ಲಾಸ್ಟಿಕನ ರಾಷ್ಟ್ರಧ್ವಜದ ಅಗೌರವವನ್ನು ತಡಗಟ್ಟಲು ಸರ್ಕಾರಕ್ಕೆ ಆದೇಶವನ್ನು ಕೊಡಲಾಗಿತ್ತು ಅದಕ್ಕನುಸಾರ ಕೇಂದ್ರೀಯ ಮತ್ತು ರಾಜ್ಯದ ಗೃಹ ವಿಭಾಗ ಮತ್ತು ಶಿಕ್ಷಣ ವಿಭಾಗದ ಮೂಲಕ ಈ ವಿಷಯ ಕುರಿತು ಒಂದು ಸುತ್ತೋಲೆಯನ್ನು ಹೊರಡಿಸಿದೆ.
ಇತ್ತೀಚಿನ ದಿನದಲ್ಲಿ ಸರ್ಕಾರವು `ಪ್ಲಾಸ್ಟಿಕ ನಿರ್ಬಂಧ’ದ ನಿರ್ಣಯವನ್ನೂ ತೆಗೆದುಕೊಂಡಿದೆ. ಇದರ ಪ್ರಕಾರ ಪ್ಲಾಸ್ಟಿಕನ ರಾಷ್ಟ್ರಧ್ವಜದ ಮಾರಾಟ ಮಾಡುವುದು ಕಾನೂನು ಬಾಹಿರವಾಗಿದೆ. ಉಚ್ಚ ನ್ಯಾಯಾಲಯವು ವಿಶೇಷವಾಗಿ ಸರ್ಕಾರಕ್ಕೆ ಆದೇಶವನ್ನು ಕೊಡುವುದರ ಮೂಲಕ ಸರ್ಕಾರವು ರಾಷ್ಟ್ರಧ್ವಜದ ಅವಮಾನವನ್ನು ತಡೆಯಲು ರಾಷ್ಟ್ರಧ್ವಜ ಗೌರವ ಕಾಪಾಡಲು ಸಮಿತಿಗಳನ್ನು, ಸ್ಥಳಿಯ ಸ್ವಯಂಸೇವಾ ಸಂಸ್ಥೆಗಳನ್ನು ಸೇರಿಸಿ ಮಾಡಬೇಕು.
ಈ ಉಪಕ್ರಮದ ಅಂತರ್ಗತದಲ್ಲಿ ಪ್ಲಾಸ್ಟಿಕನ ರಾಷ್ಟ್ರಧ್ವಜದ ಮಾಧ್ಯಮದಿಂದ ಆಗುವಂತಹ ಅಗೌರವವನ್ನು ತಡೆಗಟ್ಟಲು ವಿವಿಧ ಮಾಧ್ಯಮದಿಂದ ಜಾಗೃತಿಯನ್ನು ಮಾಡುವುದು ಅನಿವಾರ್ಯವಾಗಿದೆ.
ಮನವಿಯನ್ನು ಅಪರ ಜಿಲ್ಲಾಧಿಕಾರಿ ಕುಮಾರ್, ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರವಿಕಾಂತೆ ಗೌಡ ಮತ್ತು ಮಂಗಳೂರು ನಗರ ಆಯುಕ್ತರಾದ ಟಿ. ಆರ್. ಸುರೇಶ್ ಇವರಿಗೆ ಸಲ್ಲಿಸಲಾಯಿತು.
ಮನವಿ ನೀಡುವ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಪ್ರಭಾಕರ ನಾಯ್ಕ್, ಉಪೇಂದ್ರ ಆಚಾರ್ಯ, ಯೋಗೀಶ್, ರಾಜೇಶ್, ಲೀಲಾವತಿ ಮೊದಲಾದವರು ಉಪಸ್ಥಿತರಿದ್ದರು.
ಮನವಿ ಸ್ವೀಕರಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರು ತಕ್ಷಣ ಇದನ್ನು ಎಲ್ಲಾ ಉಪ ಇಲಾಖೆಗೆ ಸೂಚನೆ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ಸಮಿತಿ ಮುಖಂಡರು ತಿಳಿಸಿದ್ದಾರೆ.
Comments are closed.