ಕರಾವಳಿ

ತೊಕ್ಕೊಟ್ಟು ಸಮೀಪ ರೈಲ್ವೇ ಹಳಿ ದಾಟುತ್ತಿದ್ದ ಯುವತಿ ರೈಲಿಗೆ ಸಿಲುಕಿ ಮೃತ್ಯು

Pinterest LinkedIn Tumblr

ಮಂಗಳೂರು,ಆಗಸ್ಟ್.08 : ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಸಮೀಪದ ರೈಲ್ವೇ ಹಳಿಯನ್ನು ದಾಟುತ್ತಿದ್ದ ಯುವತಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.

ಮೃತ ದುರ್ದೈವಿಯನ್ನು ಕಂಕನಾಡಿ ನಿವಾಸಿ ಮಹಮ್ಮದ್ ಕುಂಞಿ ಎಂಬವರ ಪುತ್ರಿ ತಬಸ್ಸುಂ (23) ಎಂದು ಗುರುತಿಸಲಾಗಿದೆ.. ವಿವಾಹಿತೆಯಾಗಿರುವ ಅವರು ಫಾರ್ಮಸಿ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ರೈಲ್ವೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿದ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Comments are closed.