ಕರಾವಳಿ

ನಾಳೆ ಮಂಗಳೂರಿನಲ್ಲಿ ಜಿಲ್ಲಾಡಳಿತದ ವತಿಯಿಂದ ಶ್ರೀ ಕೃಷ್ಣ ಜಯಂತಿ

Pinterest LinkedIn Tumblr


ಮಂಗಳೂರು, ಸೆಪ್ಟಂಬರ್.01: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಆಶ್ರಯದಲ್ಲಿ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಸೆಪ್ಟಂಬರ್ 2 ರಂದು ಮಂಗಳೂರು ಪುರಭವನದ ಮಿನಿ ಸಭಾ ಭವನದಲ್ಲಿ ನಡೆಯಲಿರುವುದು.

ಅಪರಾಹ್ನ 3 ಗಂಟೆಗೆ ಕಾರ್ಯಕ್ರಮವು ನಡೆಯಲಿದ್ದು  ನಗರಾಭಿವೃದ್ಧಿ ಮತ್ತು ವಸತಿ ಸಚಿವ, ಕರ್ನಾಟಕ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿರುವರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು, ಮಂಗಳೂರು ಲೋಕಸಭಾ ಸದಸ್ಯ ನಳಿನ್‍ಕುಮಾರ್ ಕಟೀಲ್, ಮೂಡಬಿದ್ರೆ ವಿಧಾನ ಸಭಾಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್, ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರದ ಶಾಸಕ ಭರತ್ ಶೆಟ್ಟಿ ವೈ., ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಕೆ. ಭಾಸ್ಕರ್ ಮೊಯಿಲಿ, ನಿಗಮ, ಮಂಡಳಿಗಳು ಮತ್ತು ಅಕಾಡೆಮಿಗಳ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

ಹಿರಿಯ ಸಾಹಿತಿ ಮತ್ತು ನಿವೃತ್ತ ಉಪನ್ಯಾಸಕರಾದ ಪ್ರೊ ಎಂ. ರಾಮಚಂದ್ರ ಇವರು ಶ್ರೀ ಕೃಷ್ಣ ಜಯಂತಿಯ ಸಂದೇಶವನ್ನು ನೀಡಲಿರುವರು.

Comments are closed.