ಕರಾವಳಿ

ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ಅಗ್ನಿಶಾಮಕ ಚಾಲಕ ಶ್ರೀನಿವಾಸ ಪೂಜಾರಿ

Pinterest LinkedIn Tumblr

ಉಡುಪಿ: ಅಗ್ನಿಶಾಮಕ ಚಾಲಕ ಶ್ರೀನಿವಾಸ ಪೂಜಾರಿ ಇವರು ಜೂನ್ 20, 1996 ರಂದು ಕರ್ನಾಟಕ ರಾಜ್ಯ ಅಗ್ನಿ ಶಾಮಕ ಮತ್ತು ತುರ್ತುಸೇವೆಗಳ ಇಲಾಖೆಗೆ ಸೇರ್ಪಡೆಗೊಂಡು ಇಲಾಖೆಯಲ್ಲಿ ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಾ ಬಂದಿರುತ್ತಾರೆ.

ಇವರು 2017 ನೇ ಸಾಲಿನಲ್ಲಿ ಉಡುಪಿ ಅಗ್ನಿ ಶಾಮಕ ಠಾಣೆಗೆ ವರ್ಗಾವಣೆ ಹೊಂದಿ ಠಾಣೆಯಲ್ಲಿ ಹಾಜರಾದ ಅಗ್ನಿಕರೆಗಳಲ್ಲಿ ಮತ್ತು ವಿಶೇಷ ಕರೆಗಳಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದು, ಸಾರ್ವಜನಿಕರ ಆಸ್ತಿ ಹಾಗೂ ಪ್ರಾಣ ರಕ್ಷಣೆ ಮಾಡಿರುತ್ತಾರೆ. ಇವರ ಅತ್ಯುತ್ತಮ ಸೇವೆ ಗುರುತಿಸಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ವತಿಯಿಂದ 2018 ರ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ನೀಡಿ ಗೌರವಿಸಲಾಗಿರುತ್ತದೆ. ಇವರಿಗೆ ಉಡುಪಿ ಅಗ್ನಿ ಶಾಮಕ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಶುಭ ಕೋರಿರುತ್ತಾರೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ, ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಉಡುಪಿ ಇವರ ಪ್ರಕಟಣೆ ತಿಳಿಸಿದೆ.

Comments are closed.