ಮಂಗಳೂರು : ನಗರದ ಸಂಘನಿಕೇತನದಲ್ಲಿ ನಡೆಯುತಿರುವ 71ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ದ ಸಂದರ್ಭದಲ್ಲಿ ಹುಬ್ಬಳ್ಳಿಯ ಖ್ಯಾತ ಹಿಂದುಸ್ಥಾನಿ ಗಾಯಕ ಜಯತೀರ್ಥ ಮೇವುಂಡಿ ರವರ ಭಜನ್ ಸಂಧ್ಯಾ ಕಾರ್ಯಕ್ರಮವು ಆದಿತ್ಯವಾರ ಸಾಯಂಕಾಲ 6 ಗಂಟೆಗೆ ಗಣೇಶೋತ್ಸವದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯುವ ವೇದಿಕೆಯಲ್ಲಿ ಜರಗಲಿರುವುದು.
ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿಯ ಜೊತೆ ಕಾರ್ಯದರ್ಶಿ ಸುರೇಶ್ ವಿ . ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿರುತಾರೆ.
Comments are closed.