ಕರಾವಳಿ

ಸರ್ಜಿಕಲ್ ಸ್ಟ್ರೈಕ್ ಶೌರ್ಯ ದಿನಾಚರಣೆ : ಶಾಸಕ ವೇದವ್ಯಾಸ್ ಕಾಮತ್‌ರಿಂದ ಯೋಧರಿಗೆ ಗೌರವ

Pinterest LinkedIn Tumblr

ಮಂಗಳೂರು :  ಸರ್ಜಿಕಲ್ ಸ್ಟ್ರೈಕ್ ಶೌರ್ಯ ದಿನಾಚರಣೆಯ ಅಂಗವಾಗಿ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ,ಭಾರತೀಯ ಜನತಾ ಪಕ್ಷದ ವತಿಯಿಂದ ನಿವೃತ್ತ ಯೋಧರ ಮನೆಗೆ ತೆರಳಿ ಯೋಧರನ್ನು ಗೌರವಿಸಲಾಯಿತು.

ಭಾರತೀಯ ಫಿರಂಗಿದಳದಲ್ಲಿ ಹಲವಾರು ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಕ್ಯಾಪ್ಟನ್ ದೀಪಕ್ ಅಡ್ಯಂತಾಯ ಮತ್ತು ಭಾರತೀಯ ವಾಯು ಸೇನೆಯ ನಿವೃತ್ತ ಯೋಧ ಸಾರ್ಜೆಂಟ್ ಭಗವಾನ್ ದಾಸ್ ಅವರನ್ನು ಶಾಲು ಹೊದಿಸಿ,ಫಲ ಪುಷ್ಪಗಳನ್ನು ನೀಡಿ ಗೌರವಿಸಿದರು.

ಈ ಸಂಧರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾ.ಗಣೇಶ್ ಕಾರ್ಣಿಕ್,ಮಂಡಳ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಕಂಡೆಟ್ಟು,ಭಾಸ್ಕರ ಚಂದ್ರ ಶೆಟ್ಟಿ,ಮಂಡಲ ಉಪಾಧ್ಯಕ್ಷ ಶ್ರೀನಿವಾಸ್ ಶೇಟ್,ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರಭಾ ಮಾಲಿನಿ,ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ,ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೇಶ್ ಶೆಟ್ಟಿ ಆಕಾಶ್ ಭವನ,ಯೋಗೀಶ್ ಶೆಣೈ,ಗುರುಚರಣ್,ಪ್ರಶಾಂತ್ ಪೈ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

Comments are closed.