ಕುಂದಾಪುರ: ಶಿವಮೊಗ್ಗ-ಬೈಂದೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ತಮ್ಮ ಕುಟುಂಬ ಸಮೇತರಾಗಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದರು.
ಶರನ್ನವರಾತ್ರಿಯ ದಿನವಾದ ಬುಧವಾರ ಬೆಳಿಗ್ಗೆ ಶ್ರೀ ದೇವಳಕ್ಕೆ ಆಗಮಿಸಿದ ಅವರು ದೇವಿಯ ದರ್ಶನ ಪಡೆದರು ಮತ್ತು ಚಂಡಿಕಾ ಯಾಗದಲ್ಲಿ ಪಾಲ್ಘೊಂಡು ಪೂರ್ಣಾಹುತಿ ಸಲ್ಲಿಸಿದರು. ನಾಡಿದ್ದು ಬರುವ ಚುನಾವಣೆಯ ಅಭ್ಯರ್ಥಿಯಾಗಿರುವ ಹಿನ್ನೆಲೆ ಕೊಲ್ಲೂರು ದೇವಳ ಭೇಟಿ ವಿಶೇಶವಾಗಿತ್ತು.
ಉಡುಪಿ ಚಿಕ್ಕಮಗಳುರು ಸಂಸದೆ ಶೋಭಾ ಕರಂದ್ಲಾಜೆ, ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ಮುಖಂಡರಾದ ಉದಯಕುಮಾರ್ ಶೆಟ್ಟಿ ಮೊದಲಾದವರಿದ್ದರು.
Comments are closed.