ಕರಾವಳಿ

ಕಾಶಿ ಮಠಾಧೀಶರಿಂದ ತಿರುಮಲ ದೇವಸ್ಥಾನದ ಬ್ರಹ್ಮ ರಥೋತ್ಸವ ಪ್ರಯುಕ್ತ ವಿಶೇಷ ಪ್ರಾರ್ಥನೆ

Pinterest LinkedIn Tumblr

ಮಂಗಳೂರು : ವಿಶ್ವ ಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನದ ಶ್ರೀ ವೆಂಕಟೇಶ್ವರ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಪ್ರಯುಕ್ತ ಶ್ರೀ ದೇವರ ಸ್ವರ್ಣ ಗರುಡ ವಾಹನ ಉತ್ಸವವು ತಿರುಮಲ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರಗಿತು.

ಈ ಸಂದರ್ಭದಲ್ಲಿ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಗೆ ಶ್ರೀ ದೇವಳದ ಪದಾಧಿಕಾರಿಗಳಿಂದ ವಿಶೇಷ ಬಿರುದು ಬಾವಳಿ ಗಳಿಂದ ಉತ್ಸವಕ್ಕೆ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಸಮಸ್ತ ಹಿಂದೂ ಸಮಾಜದ ಅಭಿವೃದ್ಧಿಗಾಗಿ ಶ್ರೀಗಳವರಿಂದ ವಿಶೇಷ ಪ್ರಾರ್ಥನೆ ನೆರವೇರಿತು ಶ್ರೀ ಸಂಸ್ಥಾನದ ವತಿಯಿಂದ ವಿಶೇಷ ಮಂಗಳಾರತಿ ನಡೆಸಲಾಯಿತು .

Comments are closed.