ಕರಾವಳಿ

ಪರೇಶ್ ಮೇಸ್ತ ಪ್ರಕರಣದಲ್ಲಿ ಬಿಜೆಪಿ ಸಾವಿನ ರಾಜಕೀಯ ಮಾಡಿದೆ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ

Pinterest LinkedIn Tumblr

ಕುಂದಾಪುರ: ಬಿಜೆಪಿ ಸರಕಾರದ ವಿರುದ್ಧ ಬೈಂದೂರಿನಲ್ಲಿ ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ.

ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಪರೇಶ್ ಮೇಸ್ತಾ ಸಾವನ್ನು ಮುಂದಿಟ್ಟುಕೊಂಡು ಬಿಜೆಪಿ ಹೊಲಸು ರಾಜಕೀಯ ನಡೆಸಿತ್ತು. ಪರೇಶ್ ಮೇಸ್ತಾ ಹೆತ್ತವರನ್ನು ರಾಜಕೀಯ ಪ್ರಚಾರಕ್ಕೆ ಬಳಸಿಕೊಂಡಿತ್ತು. ಆದರೆ ಹಿಂದಿನ ಕಾಂಗ್ರೆಸ್ ಸರ್ಕಾರ ಪರೇಶ್ ಮೇಸ್ತಾ ಸಾವಿನ ತನಿಖೆಯನ್ನು ಸಿಬಿ‌ಐಗೆ ವಹಿಸಿ ೧೧ ತಿಂಗಳು ಕಳೆದಿದೆ. ಆದರೆ ಇದುವರೆಗೂ ಸಿಬಿ‌ಐ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಬಿಜೆಪಿಗೆ ಪರೇಶ್ ಕುಟುಂಬದ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ ಕೊನೆತನಕವೂ ಹೋರಾಟ ನಡೆಸುತ್ತಿತ್ತು. ಚುನಾವಣಾ ಸಮಯದಲ್ಲಿ ರಾಜಕೀಯ ಲಾಭಕ್ಕೋಸ್ಕರ ಬಿಜೆಪಿ ಪರೇಶ್ ಮೇಸ್ತಾ ಸಾವನ್ನು ಬಳಸಿಕೊಂಡಿರುವುದ ದುರಂತ. ಇಂದು ಪರೇಶ್ ಮೇಸ್ತಾ ಸಾವಿನ ಕುರಿತು ಬಿಜೆಪಿ ಧ್ವನಿ ಎತ್ತುತ್ತಿಲ್ಲ. ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಪರೇಶ್ ಮೇಸ್ತಾ ಸಾವಿನ ತನಿಖೆಗೆ ಆಗ್ರಹಿಸಿ ರಾಜ್ಯ ಮಟ್ಟದಲ್ಲಿ ಹೋರಾಟ ಸಂಘಟಿಸುತ್ತೇವೆ.

Comments are closed.