ಕರಾವಳಿ

ಸರಕಾರದ ಹಣ ಪೋಲಾಗುವ ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಬೇಡ: ಕೋಟ ಶ್ರೀನಿವಾಸ ಪೂಜಾರಿ

Pinterest LinkedIn Tumblr

ಉಡುಪಿ: ಟಿಪ್ಪು ಆಡಳಿತವು ಕೊಡಗಿನಲ್ಲಿ ಮಾರಣಹೋಮ ಮಾಡಿತ್ತು. ಟಿಪ್ಪು ಆಚರಣೆ ವೈಭವೀಕರಿಸುವ ನೆಪದಲ್ಲಿ ರಾಜ್ಯ ಸರಕಾರ ಹಿಂದುತ್ವವನ್ನು ವಿರೋಧಿಸುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಟಿಪ್ಪು ಜಯಂತಿ ಆಚರಣೆ ಮೂಲಕ ರಾಜ್ಯ ಸರಕಾರ ಕನ್ನಡಿಗರ ಮೇಲೆ ದೌರ್ಜನ್ಯ ಎಸಗುತ್ತಿದೆ. ಅಲ್ಲದೇ ಸರಕಾರದ ಹಣ ಪೋಲು ಮಾಡುತ್ತಿದೆ. ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಯಾವುದೇ ಕಾರಣಕ್ಕೂ ನನ್ನ ಹೆಸರನ್ನು ಮುದ್ರಿಸಬಾರದು ಎಂಬುದಾಗಿ ಮುಖ್ಯಮಂತ್ರಿ ಮತ್ತು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರಬರೆದಿದ್ದೇನೆ’ ಎಂದು ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Comments are closed.