ಉಡುಪಿ: ಐರೋಡಿ ಗ್ರಾಮ ಸಾಸ್ತಾನ ನಿವಾಸಿ ಮಹಿಳೆಯೊಬ್ಬರು ಬುಧವಾರ ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ಮೃತಪಟ್ಟಿದ್ದಾರೆ.
ಐರೋಡಿ ಗ್ರಾಮ ನಿವಾಸಿ ಬೇಬಿ ದೇವಾಡಿಗ (56) ಮೃತಪಟ್ಟ ಮಹಿಳೆ. ಸ್ಥಳಿಯರೊಬ್ಬರ ತೋಟದ ಕೆಲಸಕ್ಕೆ ಹೊರಟಿದ್ದ ಮಹಿಳೆಗೆ ಜೇನು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಮಹಿಳೆಗೆ ಮೊದಲು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಾಗಿತ್ತು. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.