ಕರಾವಳಿ

ಬೆಳಗಾವಿ ಪ್ರತಿಭಟನೆಯಲ್ಲಿ ಸಾಥ್ ನೀಡಿದ ಶಾಸಕ ವೇದವ್ಯಾಸ ಕಾಮಾತ್

Pinterest LinkedIn Tumblr

ಮಂಗಳೂರು : ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಒನರ್ಸ್ ಅಸೋಸಿಯೇಶನ್ ವತಿಯಿಂದ ಬೆಳಗಾವಿಯ ಸುವರ್ಣ ಸೌಧದ ಬಳಿ ಸೋಮವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಸ್ಟೋನ್ ಕ್ರಷರ್ ಮತ್ತು ಕಟ್ಟಡದ ಕಲ್ಲು ಉದ್ದಿಮೆದಾರರ ಮೇಲೆ ಸರ್ಕಾರದ ನಿಯಮಗಳಿಂದ ತೊಂದರೆ ಆಗುತ್ತಿದ್ದಲ್ಲಿ ಅದನ್ನು ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರು ತಕ್ಷಣ ಪರಿಹರಿಸಬೇಕೆಂದು ಹೇಳಿದರು. ಅವರ ನ್ಯಾಯಯುತ ಬೇಡಿಕೆಗಳನ್ನು ಸರಕಾರ ಪರಿಶೀಲಿಸಬೇಕು ಎಂದು ಶಾಸಕ ಕಾಮತ್ ಸರಕಾರವನ್ನು ಒತ್ತಾಯಿಸಿದರು.

Comments are closed.