ಕರಾವಳಿ

ಸುರತ್ಕಲ್‌ನಲ್ಲಿ ಬಂಟರ ಕ್ರೀಡಾಕೂಟ : ಇಡ್ಯಾ ತಂಡಕ್ಕೆ ಸಮಗ್ರ ಪ್ರಶಸ್ತಿ

Pinterest LinkedIn Tumblr

ಸುರತ್ಕಲ್ : ಬಂಟರ ಸಂಘ(ರಿ) ಸುರತ್ಕಲ್ ಮತ್ತು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ತಾಲೂಕು ಸಮಿತಿ ಇದರ ಸಹಯೋಗ ದಲ್ಲಿ ಸುರತ್ಕಲ್ ಗೋವಿಂದ ದಾಸ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಬಂಟರ ಕ್ರೀಡೋತ್ಸವದಲ್ಲಿ ಇಡ್ಯಾ ಗ್ರಾಮ ಅತೀ ಹೆಚ್ಚು ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯದರ್ಶಿ ವಸಂತ ಶೆಟ್ಟಿ, ತಾಲೂಕು ಸಮಿತಿ ಸಂಚಾಲಕ ಜಯರಾಮ ಸಾಂತ, ನಗರ ಯೋಜನೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರವೀಣ ಚಂದ್ರ ಶೆಟ್ಟಿ , ತಾಲೂಕು ಬಂಟರ ಸಂಘದ ಅಧ್ಯಕ್ಷ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಉದ್ಯಮಿ ನಿತ್ಯಾನಂದ ಶೆಟ್ಟಿ, ಸುಂದರ ಎಂ.ಶೆಟ್ಟಿ , ಕಾವೂರು ಬಂಟರ ಸಂಘದ ಅಧ್ಯಕ್ಷ ಆನಂದ ಶೆಟ್ಟಿ ವೇಣೂರು, ಸುಭಾಷ್ ಶೆಟ್ಟಿ ಅರಂತಬೆಟ್ಟು ಮೊದಲಾದವರು ಉಪಸ್ಥಿತರಿದ್ದು ಬಹುಮಾನ ವಿತರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಧಾಕರ ಎಸ್. ಪೂಂಜ ವಹಿಸಿದ್ದರು. ಸಮಗ್ರ ಪ್ರಶಸ್ತಿಯನ್ನು ಲೀಲಾಧರ ಶೆಟ್ಟಿ, ಗುಣಶೇಖರ ಶೆಟ್ಟಿ, ದೇವೇಂದ್ರ ಶೆಟ್ಟಿ, ವೇದಾವತಿ ಶೆಟ್ಟಿ, ಬಬಿತಾ ಶೆಟ್ಟಿ, ಅಕ್ಷತಾ ಶೆಟ್ಟಿ ಸ್ವೀಕರಿಸಿದರು. ಕ್ರೀಡಾ ಕಾರ್ಯದರ್ಶಿಗಳಾದ ರಾಘವೇಂದ್ರ ಶೆಟ್ಟಿ ತಡಂಬೈಲುಗುತ್ತು, ವೇದಾವತಿ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ, ಸಂಘದ ಉಪಾಧ್ಯಕ್ಷ ನವೀನ್ ಶೆಟ್ಟಿ ಪಡ್ರೆ , ಕಾರ್ಯದರ್ಶಿ ಲೋಕಯ್ಯ ಶೆಟ್ಟಿ, ಮುಂಚೂರು, ಮಹಿಳಾ ವೇದಿಕೆ ಅಧ್ಯಕ್ಷೆ ಬೇಬಿ ಶೆಟ್ಟಿ, ಕಾರ್ಯದರ್ಶಿ ಚಿತ್ರಾ ಜೆ ಶೆಟ್ಟಿ, ಸಂಘದ ಪದಾಧಿಕಾರಿಗಳಾದ ಪ್ರವೀಣ್ ಶೆಟ್ಟಿ, ಪುಷ್ಪರಾಜ ಶೆಟ್ಟಿ ಕುಡುಂಬೂರು ಉಪಸ್ಥಿತರಿದ್ದರು.

ರಾಜೇಶ್ವರಿ ಡಿ. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸುಧಾಕರ ಪೂಂಜ ಸ್ವಾಗತಿಸಿದರು. ರಾಘವೇಂದ್ರ ಶೆಟ್ಟಿ ವಂದಿಸಿದರು.

ಸಮಾರಂಭದಲ್ಲಿ ಖ್ಯಾತ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ , ಒಂದು ಮೊಟ್ಟೆಯ ಕತೆ ಖ್ಯಾತಿಯ ನಟ ರಾಜ್ ಬಿ. ಶೆಟ್ಟಿ ತೋಕೂರು, ಪ್ರೇಮ್ ಶೆಟ್ಟಿ ಸುರತ್ಕಲ್ , ಅಸ್ತಿಕ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.

Comments are closed.