ಕರಾವಳಿ

ದೇರಳಕಟ್ಟೆ ದರೋಡೆ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Pinterest LinkedIn Tumblr

ಮಂಗಳೂರು : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆ ಬಳಿಯ ಸ್ಟೂಡೆಂಟ್ ಹೌಸ್ ಎಂಬ ಕಟ್ಟಡದ ಕೊಠಡಿಗೆ ನುಗ್ಗಿ ಹಲ್ಲೆ ನಡೆಸಿ ಮೊಬೈಲ್ ಫೋನ್ ಗಳನ್ನು ಸುಲಿಗೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾಂ ಜಿಲ್ಲೆ ನಿವಾಸಿ ಪ್ರಸ್ತುತ ದೇರಳಕಟ್ಟೆಯಲ್ಲಿ ವಾಸ್ತವ್ಯ ಹೊಂದಿರುವ ಮೊಹಮ್ಮದ್ ಅಕ್ಬರ್ (22) ಹಾಗೂ ಸೋಮೇಶ್ವರ ಶಾಂತಿಭಾಗ್ ನಿವಾಸಿ ಮೊಹಮ್ಮದ್ ಮುಸಾವಿರ್ (23) ಬಂಧಿತ ಆರೋಪಿಗಳು.

22-12-2018 ರಂದು ಸಂಜೆ ಸುಮಾರು 3-00 ಗಂಟೆ ಸಮಯಕ್ಕೆ ಮಂಗಳೂರು ತಾಲೂಕು ಕೋಟೆಕಾರು ಗ್ರಾಮದ ದೇರಳಕಟ್ಟೆ ಯೇನೆಪೋಯ ಆಸ್ಪತ್ರೆ ಬಳಿಯಿರುವ ಸಹಾಲ್ ಸ್ಟೂಡೆಂಟ್ ಹೌಸ್ ಎಂಬಲ್ಲಿ ಲೆನಿನ್ ಮತ್ತು ಅವರ ಸ್ನೇಹಿತ ವಿಷ್ಣು ಪ್ರಕಾಶನ್ ಪಿ ಪಿ ರವರು ಇದ್ದಾಗ ಆರೋಪಿಗಳಾದ ಲುಕ್ಮಾನ್, ಅಕ್ಬರ್ ಮತ್ತು ಇತರ ಇಬ್ಬರು ಯುವಕರು ರೂಮಿನ ಒಳಗಡೆ ಬಂದು ಲೆನಿನ್ ಮತ್ತು ವಿಷ್ಣು ಪ್ರಕಾಶ್ ಟಿ ಪಿ ರವರಿಗೆ ಕೈಯಿಂದ ಹೊಡೆದು ಕಾಲಿನಿಂದ ತುಳಿದು ದೂರುದಾರ ಬಳಿಯಿದ್ದ ರೂ. 8000/- ಮೌಲ್ಯದ ಸ್ಯಾಮ್ ಸಂಗ್ ಮೊಬೈಲ್ ಮತ್ತು ಅದರಲ್ಲಿದ್ದ ಸಿಮ್ ಮತ್ತು ವಿಷ್ಣು ಪ್ರಕಾಶ್ ರವರ ರೂ. 10000/- ಮೌಲ್ಯದ ಮೊಬೈಲ್ ಮತ್ತು ಸಿಮ್ ಕಾರ್ಡ್ ನ್ನು ಆರೋಪಿಗಳು ಬಲತ್ಕಾರವಾಗಿ ಕಸಿದುಕೊಂಡು ಹೋಗಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳು ಮಂಗಳೂರು ನಗರದ ದೇರಳಕಟ್ಟೆಯ ಪರಿಸರದಲ್ಲಿದ್ದಾರೆಂಬ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಈ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಶಾಂತಾರಾಮ, ಎಎಸ್ಐ ಶಶಿಧರ ಶೆಟ್ಟಿ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Comments are closed.