ಮಂಗಳೂರು : ನಡೆದಾಡುವ ದೇವರೆಂದೇಖ್ಯಾತರಾದ ಭಾರತದ ಅನರ್ಘ್ಯ ರತ್ನದಂತಿದ್ದ ಡಾ. ಶಿವಕುಮಾರ ಮಹಾಸ್ವಾಮೀಜಿಯವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಮ್ಮ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಸಹಸ್ರಾರು ಮಕ್ಕಳಿಗೆ ವಿದ್ಯಾದಾನ ಮಾಡಿರುವ ಪೂಜ್ಯರು ಕನ್ನಡ ಸಾರಸ್ವತ ಲೋಕಕ್ಕೆ ಅನುಪಮವಾದ ಕೊಡುಗೆಯನ್ನು ನೀಡಿರುವುದನ್ನು ಕಲ್ಕೂರ ಸ್ಮರಿಸಿದ್ದಾರೆ.
Comments are closed.