ಕರಾವಳಿ

ಕರ್ನಾಟಕ ಪ್ರಾದೇಶಿಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಆರ್.ಧನರಾಜ್ ಅಯ್ಕೆ

Pinterest LinkedIn Tumblr

ಮಂಗಳೂರು : ಮಂಗಳೂರಿನಲ್ಲಿ ನೂತನವಾಗಿ ಪ್ರಾರಂಭಗೊಳ್ಳಲ್ಲಿರುವ ಕರ್ನಾಟಕ ಪ್ರಾದೇಶಿಕ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಅಧ್ಯಕ್ಷರಾಗಿ ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಆರ್.ಧನರಾಜ್ ಅವರು ಅಯ್ಕೆಯಾಗಿರುತ್ತಾರೆ.

ಜನವರಿ 27ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಕೋಸ್ಟಲ್‌ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟದ ಆಶ್ರಯದಲ್ಲಿ ನಡೆಯಲಿರುವ “ತುಳು ಚಿತ್ರ ಶತೋತ್ಸವ” ಕಾರ್ಯಕ್ರಮದಲ್ಲಿ ನೂತನ ಸಂಘ ಉದ್ಘಾಟನೆಗೊಳ್ಳಲ್ಲಿದ್ದು, ಈ ಸಂದರ್ಭ ಆರ್.ಧನರಾಜ್ ಅವರು ನೂತನ ಸಂಘದ ಅಧ್ಯಕ್ಷರಾಗಿ ಅಧಿಕಾರ ( ಸ್ವೀಕರಿಸಲಿರುವರು) ವಹಿಸಲಿರುವರು.

Comments are closed.