ಕರಾವಳಿ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ : ಮೂವರು ಯುವಕರ ಬಂಧನ

Pinterest LinkedIn Tumblr

ಮಂಗಳೂರು, ಜನವರಿ. 25: ನಗರದ ಪದವು ಗ್ರಾಮದ ಕುಲಶೇಖರ ಚೌಕಿ ಎಂಬಲ್ಲಿ ರಸ್ತೆ ಬದಿಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದಲ್ಲಿ ಮೂವರು ಯುವಕರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪದವು ಕಕ್ಕೆಬೆಟ್ಟು ನಿವಾಸಿ ಜಿತಿನ್ (25), ನೀರುಮಾರ್ಗ ಪ್ರಕೃತಿ ಲೇಔಟ್ ನಿವಾಸಿ ಮೋಹಿತ್ ಕುಮಾರ್ (27 ಹಾಗೂ ಮೂಡುಶೆಡ್ಡೆ ಶಿವನಗರ ನಿವಾಸಿ ಗುರುರಾಜ್ (25) ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, NDPS ಕಾಯ್ದೆಯಡಿಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಉಪ ವಿಭಾಗದ ಎಸಿಪಿ ರಾಮರಾವ್ ನಿರ್ದೇಶನದಂತೆ ಕಂಕನಾಡಿ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಅಶೋಕ್ ನೇತೃತ್ವದಲ್ಲಿ ಠಾಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Comments are closed.