ಕರಾವಳಿ

ಕನ್ನಡ ಕೈರಳಿ ಪ್ರಕಾಶನದ ವತಿಯಿಂದ ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ರಿಗೆ ಸಮ್ಮಾನ

Pinterest LinkedIn Tumblr

ಮಂಗಳೂರು. ಕನ್ನಡ ಕೈರಳಿ ಪ್ರಕಾಶನದ ಹನ್ನೆರಡನೇ ವಾರ್ಷಿಕೋತ್ಸವ ಹಾಗೂ ಕಾಸರಗೋಡು ಸಿರಿಗನ್ನಡ ಸಾಹಿತಿಗಳ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರನ್ನು ಸಮ್ಮಾನಿಸಲಾಯಿತು.

ಶುಕ್ರವಾರ ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ನಡೆದ ಈ ಸಮಾರಂಭದಲ್ಲಿ ಕೇಂದ್ರ ಸರಕಾರದ ಕುಡಿವ ನೀರು , ನೈರ್ಮಲ್ಯ ಖಾತೆ ಸಚಿವರಾದ ಶ್ರೀ ರಮೇಶ್ ಜಿಗಜಿಣಗಿ ಇವರು ಎಸ್.ಜಗದೀಶ್ಚಂದ್ರ ಅಂಚನ್ ಅವರನ್ನು ಸನ್ಮಾನಿಸಿದರು .

ಕಳೆದ 27 ವರ್ಷಗಳಿಂದ ಕ್ರೀಡಾ ಬರವಣಿಗೆ ಮೂಲಕ ವಿವಿಧ ಪತ್ರಿಕೆಗಳಲ್ಲಿ ಗುರುತಿಸಿಕೊಂಡು ಹಲವಾರು ಪ್ರಶಸ್ತಿಗಳ ಜೊತೆಗೆ 2016ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , 2018ರ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿಯನ್ನು ಜಗದೀಶ್ಚಂದ್ರ ಪಡೆದು ಕೊಂಡಿದ್ದಾರೆ . ಇವರು ಬರೆದ 3500ಕ್ಕೂ ಹೆಚ್ಚು ಕ್ರೀಡಾ ಬರವಣಿಗೆಯ ಸಾಧನೆಯನ್ನು ಗುರುತಿಸಿ , ಕನ್ನಡ ಕೈರಳಿ ಪ್ರಕಾಶನದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಮ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲು , ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಪ್ರದೀಪ್ ಕುಮಾರ್ ಕಲ್ಕೂರಾ , ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಹಕರಾದ ಶ್ರೀ ಸದಾನಂದ ಪೆರ್ಲ , ಗಡಿನಾಡ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಪ್ರಭಾಕರ್ ಕಲ್ಲೂರಾಯ , ನ್ಯಾಯವಾದಿ ಶ್ರೀ ಗಂಗಾಧರ್ ಉಳ್ಳಾಲ್ , ಶ್ರೀ ಎಂ.ಬಿ.ಸದಾಶಿವ , ಶ್ರೀ ಎ.ಆರ್.ಸುಬ್ಬಯ್ಯಕಟ್ಟೆ, ಅಖಿಲೇಶ್ ನಗುಮುಖಂ ಹಾಗೂ ರವಿ ನಾಯ್ಯಾಪು ಮೊದಲಾದವರು ಉಪಸ್ಥಿತರಿದ್ದರು.

Comments are closed.