ಕರಾವಳಿ

ಪಣಂಬೂರ್ ಬಳಿ ಮಟ್ಕಾ ಚೀಟಿ ಬರೆಯುತ್ತಿದ್ದ ಆರೋಪಿ ಸೆರೆ – ನಗದು ವಶ

Pinterest LinkedIn Tumblr

ಮಂಗಳೂರು : ಪಣಂಬೂರು ಸಮೀಪ ಮಟ್ಕಾ ಚೀಟಿ ಬರೆಯುತ್ತಾ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪಿಯನ್ನು ಪಣಂಬೂರ್ ಪೊಲೀಸರು ಬಂಧಿಸಿ ನಗದು ಹಣ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಉಡುಪಿ ಜಿಲ್ಲೆಯ ಮಧ್ವ ನಗರ, ಕೊಡವೂರು ಗ್ರಾಮ ನಿವಾಸಿ ತಿಪ್ಪೆಸ್ವಾಮಿ (46) ಎಂದು ಗುರುತಿಸಲಾಗಿದೆ.

ಪಣಂಬೂರು ಠಾಣಾ ಸರಹದ್ದಿನ ಬೈಕಂಪಾಡಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಚೀಟಿ ಬರೆಯುತ್ತಾ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಸಂದರ್ಭ ಆರೋಪಿಯನ್ನು ಬಂಧಿಸಲಾಗಿದೆ. ಮಟ್ಕಾ ಬರೆಯಲು ಉಪಯೋಗಿಸಿದ ಮಟ್ಕಾ ಚೀಟಿ ಪೆನ್ನು,ಮೊಬೈಲ್-2 ನಗದು ಹಣ 1390 ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ಉತ್ತರ ವಿಭಾಗದ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಆರ್.ಶ್ರೀನಿವಾಸ್ ಗೌಡ,ಅವರ ನೇತೃತ್ವದಲ್ಲಿ ನಡೆದ ಪತ್ತೆ ಕಾರ್ಯಾಚರಣೆಯಲ್ಲಿ ಪಣಂಬೂರು ಠಾಣಾ ಪಿ.ಐ ಶ್ರೀ ರಫೀಕ್ ಕೆ.ಎಮ್, ಪಿ.ಎಸ್.ಐ ಶ್ರೀಉಮೇಶ್ ಕುಮಾರ್.ಎಂ.ಎನ್ ಹಾಗೂ ಸಿಬ್ಬಂದಿಗಳು ಶ್ರಮಿಸಿರುತ್ತಾರೆ.

Comments are closed.