ಉಡುಪಿ: ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕಾಶ್ಮೀರದ ಪುಲ್ಘಾಮದಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ 25 ಲಕ್ಷ ದೇಣಿಗೆ ನೀಡಲಾಯಿತು.
ಉಡುಪಿ ಜಿಲ್ಲಾ ಮೊಗವೀರ ಯುವಸಂಘಟನೆ, ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್, ಸಮಾನ ಮನಸ್ಕ ಸಂಘ ಸಂಸ್ಥೆಗಳು ಹಾಗೂ ವಿವಿಧ ಶಾಲಾ-ಕಾಲೇಜುಗಳ ಸಹಯೋಗದಲ್ಲಿ ಅಂಬಲಪಾಡಿಯ ಶ್ಯಾಮಿಲಿ ಸಂಭಾಂಗಣದಲ್ಲಿ ಸೋಮವಾರ ನಡೆದ ಹುತಾತ್ಮ ಯೋಧರಿಗೆ ಅಶ್ರುತರ್ಪಣ ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ನಾಡೋಜಾ ಡಾ. ಜಿ. ಶಂಕರ್ ಅವರು ಉಡುಪಿ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರಿಗೆ ಇಪ್ಪತ್ತೈದು ಲಕ್ಷದ ಚೆಕ್ ಹಸ್ತಾಂತರಿಸಿದರು.
Comments are closed.