ಕರಾವಳಿ

ಜೈಲು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ವಿಚಾರಣಾಧೀನ ಕೈದಿಗಳು ಬಳ್ಳಾರಿ ಜೈಲ್‌‌ಗೆ..

Pinterest LinkedIn Tumblr

(ಕಡತ ಚಿತ್ರ)

ಮಂಗಳೂರು, ಫೆಬ್ರವರಿ. 23: ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಸಬ್ ಜೈಲಿನ ಭದ್ರತಾ ಸಿಬ್ಬಂದಿಗಳಿಬ್ಬರ ಮೇಲೆ ಹಲ್ಲೆ ನಡೆಸಿದ್ದ 10 ಮಂದಿ ವಿಚಾರಣಾಧೀನ ಕೈದಿಗಳನ್ನು ಬಳ್ಳಾರಿ ಜೈಲ್‌ಗೆ ಸ್ಥಳಾಂತರಿಸಲಾಗಿದೆ. ಹಲ್ಲೆ ನಡೆಸಿದ 10 ಮಂದಿ ವಿಚಾರಣಾಧೀನ ಕೈದಿಗಳನ್ನು ಮುಂಜಾಗ್ರತಾ ಕ್ರಮವಾಗಿ ಬಳ್ಳಾರಿ ಜೈಲ್‌ಗೆ ಸ್ಥಳಾಂತರಿಸಲಾಗಿದೆ ಎಂದು ಜೈಲು ಮೂಲಗಳು ತಿಳಿಸಿವೆ.

ಕೊಲೆ ಪ್ರಕರಣದ ಆರೋಪಿಯಾಗಿರುವ ಮುಸ್ತಾಕ್ ಹಾಗೂ ಆತನ ಸಹಚರರು ತಪಾಸಣೆ ನಡೆಸುತ್ತಿದ್ದ ಕೈಗಾರಿಕಾ ಭದ್ರತಾ ಪಡೆಯ ಕೀರ್ತಿ ಕುಮಾರ್ ಮತ್ತು ಚಂದ್ರಶೇಖರ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ.

ಆರೋಪಿಗಳನ್ನು ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿತ್ತು. ಹಿಂದಿರುಗಿ ಬರುವಾಗ ನಿಯಮ ಪ್ರಕಾರ ಹೊರ ಆವರಣದಲ್ಲಿರುವ ಗೇಟ್‌ನಲ್ಲಿ ತಪಾಸಣೆ ನಡೆಸಿದ್ದಾರೆ. ಇದನ್ನು ವಿರೊಧಿಸಿ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.