ಉಡುಪಿ: ಇಂಡಿಯನ್ ಫೆಡೆರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ ಸಂಸ್ಥೆ ನವದೆಹಲಿ ಇವರ ಸಂಯೋಜಿತ ಸಂಸ್ಥೆಯಾದ, ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಅಧಿಕೃತ ಮಾನ್ಯತೆ ಹೊಂದಿದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಇದರ ಉಡುಪಿ ಜಿಲ್ಲಾ ಘಟಕ ಅಸ್ತಿತ್ವಕ್ಕೆ ಬಂದಿದೆ.
(ಅಧ್ಯಕ್ಷ ಶಶಿಧರ್ ಹೆಮ್ಮಣ್ಣ, ಕಾರ್ಯದರ್ಶಿ ಶಿಜಿತ್ ಕುಮಾರ್)
ನೂತನ ಉಡುಪಿ ಜಿಲ್ಲಾ ಪತ್ರಕರ್ತರ ಯೂನಿಯನ್ ಅಧ್ಯಕ್ಷರಾಗಿ ಕೆ.ಶಶಿಧರ್ ಹೆಮ್ಮಣ್ಣ ( ದೂರದರ್ಶನ ಉಡುಪಿ ಜಿಲ್ಲಾ ಪ್ರತಿನಿಧಿ), ಕಾರ್ಯದರ್ಶಿಯಾಗಿ ಶಿಜಿತ್ ಕುಮಾರ್ ( ಫೋಕಸ್ ಟಿವಿ), ಸಂಚಾಲಕರಾಗಿ ಆಸ್ಟ್ರೋ ಮೋಹನ್ (ಉದಯವಾಣಿ), ಜನಾರ್ಧನ್ ಕೊಡವೂರು (ವಿಜಯವಾಣಿ), ಹಾಗೂ ಗೌರವ ಅಧ್ಯಕ್ಷರಾಗಿ ಯು.ಎಸ್ ಶೆಣೈ (ಕುಂದಪ್ರಭ) ಆಯ್ಕೆಯಾಗಿದ್ದಾರೆ.
ಯೂನಿಯನ್ ಜೊತೆ ಕಾರ್ಯದರ್ಶಿಗಳಾಗಿ ಸುರೇಶ್ ಏರ್ಮಾಳ್, ಸತೀಶ್ ಕುಮಾರ್, ಉಪಾಧ್ಯಕ್ಷರುಗಳಾಗಿ ಡಾ.ಸುಧಾಕರ ನಂಬಿಯಾರ್, ಡಾ. ಆಕಾಶ್ ರಾಜ್, ಖಜಾಂಚಿ ಶ್ರೇಯಸ್.ಕೆ, ರಾಜ್ಯ ಸಂಘದ ಪ್ರತಿನಿಧಿಯಾಗಿ ರೂಪೇಶ್ ಕಲ್ಮಾಡಿ ಕಾನೂನು ಸಲಹೆಗಾರರಾಗಿ ರವಿಕಿರಣ್ ಮುರ್ಡೇಶ್ವರ, ಶಾಂತರಾಮ್ ಶೆಟ್ಟಿ ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಸುಕುಮಾರ್ ಮುದ್ರಾಡಿ, ಯಶೋದ, ಶ್ರೀಧತ್ತ ಶೆಟ್ಟಿ, ಸುರೇಶ್ ಶೆಟ್ಟಿ, ಬಿಂಬ ವಸಂತ ಕುಮಾರ್ ನಿಯುಕ್ತಿಗೊಂಡಿದ್ದಾರೆ.
Comments are closed.