ಮಂಗಳೂರು : ವಿಶಿಷ್ಠ ಭೂತಾರಾಧನೆಯ ಪರಂಪರೆಯನ್ನು ಉಳಿಸಿಕೊಂಡಿರುವ ಅತೀ ಪುರಾತನ ಬಬ್ಬುಸ್ವಾಮಿ ಕ್ಷೇತ್ರಗಳಲ್ಲಿ ಒಂದಾಗಿರುವ ಸೂಟರ್ಪೇಟೆ ಶ್ರೀ ಕೋರ್ದಬ್ಬು ದೈವಸ್ಥಾನದ ವರ್ಷಾವಧಿ ನೇಮೋತ್ಸವ ಮಾರ್ಚ್ 2ರಿಂದ 5ರವರೆಗೆ ನಡೆಯಲಿದೆ.
ಮಾರ್ಚ್ 2ರಂದು ಬೆಳಿಗ್ಗೆ ಹೋಮ ನಂತರ ಶ್ರೀ ಬಬ್ಬುಸ್ವಾಮಿ, ಪಂಜುರ್ಲಿ, ಗುಳಿಗ ದೈವಗಳ ದರ್ಶನ ಸೇವೆಯೊಂದಿಗೆ ಭಂಡಾರ ಏರುವುದು, ಮಧ್ಯಾಹ್ನ ಸ್ಥಳದ ಗುಳಿಗ ದೈವದ ನೇಮ, ರಾತ್ರಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ತನ್ನಿಮಾನಿಗ ನೇಮೋತ್ಸವ ನಡೆಯಲಿದೆ.
ಮಾರ್ಚ್ 3ರಂದು ಸಂಜೆ ರಾಹುಗುಳಿಗ ನೇಮ, ರಾತ್ರಿ ಶ್ರೀ ಪಂಜುರ್ಲಿ,ಗುಳಿಗ ನೇಮೋತ್ಸವ, ಮಾರ್ಚ್ 4ರಂದು ಮಧ್ಯಾಹ್ನ ಧರ್ಮ ದೈವದ ನೇಮ, ರಾತ್ರಿ ಸುಬ್ಬಿಗುಳಿಗ ಹಾಗೂ ಸುಬ್ಯಮ್ಮ ನೇಮೋತ್ಸವ ನಡೆಯಲಿದೆ.
ಮಾರ್ಚ್ 5ರಂದು ಮಧ್ಯಾಹ್ನ ಸಂಕಳೆ ಗುಳಿಗ ನೇಮ, ರಾತ್ರಿ ಶ್ರೀ ಕೊರಗಜ್ಜ ನೇಮ ಹಾಗೂ ಭಂಡಾರ ಇಳಿಯುವುದು.
ಮಾರ್ಚ್ 1 : ಶ್ರೀ ಸತ್ಯನಾರಾಯಣ ಪೂಜೆ
ಮಾರ್ಚ್ 1ರಂದು ವರ್ಷಂಪ್ರತಿ ನಡೆಯುವಂತೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಧರ್ಮದರ್ಶಿ ಶ್ರೀ ಭಾಸ್ಕರ ಐತಾಳ್ ರವರ ಪೌರೋಹಿತ್ಯದಲ್ಲಿ ಸಂಜೆ 6.00ಗಂಟೆಗೆ ನಡೆದು, ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ನಂತರ ವಿಜಯ ಫ್ರೆಂಡ್ಸ್ ಇದರ ಆಶ್ರಯದಲ್ಲಿ ಸುರೇಶ್ ಅತ್ತಾವರ ಇವರ ಶಿಷ್ಯವೃಂದದಿಂದ ಶ್ರೀ ಕೋರ್ದಬ್ಬು- ತನ್ನಿಮಾನಿಗ ನೃತ್ಯ ರೂಪಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮವು ನಡೆಯಲಿದೆ.
ನಾಲ್ಕು ದಿನಗಳ ನೇಮೋತ್ಸವದಂದು ಪ್ರತೀ ದಿನವು ಶ್ರೀ ಕ್ಷೇತ್ರದಲ್ಲಿ ಮಹಾ ಅನ್ನಸಂತರ್ಪಣೆ ನಡೆಯಲಿದೆ ಎಂದು ದೈವಸ್ಥಾನದ ಗುರಿಕಾರರಾದ ಶ್ರೀ ಎಸ್.ರಾಘವೇಂದ್ರ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.