ಕರಾವಳಿ

ಕೋಟ ಜೋಡಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

Pinterest LinkedIn Tumblr

ಕುಂದಾಪುರ: ಕೋಟ ಚಿಕ್ಕನಕೆರೆಯ ಜೋಡಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ನ್ಯಾಯಾಂಗನ ಬಂಧನವನ್ನು ಮತ್ತೆ 15 ದಿನಗಳ ವಿಸ್ತರಿಸಿ ಶುಕ್ರವಾರ ಕುಂದಾಪುರದ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಶ್ರೀಕಾಂತ ಎನ್.ಎ. ಆದೇಶಿಸಿದ್ದಾರೆ.

ಈ ಮೊದಲು ವಿಧಿಸಿದ್ದ ನ್ಯಾಯಾಂಗ ಬಂಧನದ ಅವಧಿ ಮಾ.1 ಕ್ಕೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಪೊಲೀಸ್ ಅಧಿಕ್ಷಕರು ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಸುಮಂಗಲಾ ನಾಯಕ್ ಅವರ ಮೂಲಕ ನಿವೇದನೆ ಸಲ್ಲಿಸಿದ್ದರು. ಯತೀಶ್ ಕಾಂಚನ್ ಮತ್ತು ಭರತ್ ಶ್ರೀಯಾನ್ ಅವರನ್ನು ಜ.26 ರಂದು ತಡರಾತ್ರಿ ಕೋಟದ ಮಣೂರು-ಚಿಕ್ಕನಕೆರೆಯಲ್ಲಿ ತಲವಾರಿನಿಂದ ಕಡಿದು ಕೊಲೆ ಮಾಡಲಾಗಿತ್ತು.

ಪ್ರಕರಣ ಸಂಬಂಧ ಡಿವೈಎಸ್ಪಿ ಜೈ ಶಂಕರ್ ನೇತೃತ್ವದ ತಂಡವು ಆರೋಪಿಗಳಾದ ಚಂದ್ರಶೇಖರ್ ರೆಡ್ಡಿ, ಹರೀಶ್ ರೆಡ್ಡಿ, ಮೆಡಿಕಲ್ ರವಿ, ಮಹೇಶ್ ಗಾಣಿಗ, ರವಿಚಂದ್ರ, ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್, ಅಭಿಷೇಕ (ಅಭಿ ಪಾಲನ್), ಹನೆಹಳ್ಳಿ ನಿವಾಸಿ ಸಂತೋಷ್ ಕುಂದರ್, ನಾಗರಾಜ ರೊಟ್ಟಿ, ಶಂಕರ್ ಮೊಗವೀರ, ರತೀಶ್ ಎಂ. ಕರ್ಕೇರ, ಭದ್ರಾವತಿಯ ನಿವಾಸಿಯಾದ ವಿದ್ಯಾರ್ಥಿ ಪ್ರಣವ್ ರಾವ್, ಪೊಲೀಸ್ ಸಿಬಂದಿಯಾದ ಪವನ್ ಅಮೀನ್ ಮತ್ತು ವೀರೇಂದ್ರ ಆಚಾರ್ಯ, ಸುಜಯ್ ಹಾಗೂ ಮೊಹಮ್ಮದ್ ತೌಸಿಪ್ ಎಂಬುವರನ್ನು ಈವರೆಗೆ ಬಂಧಿಸಿದೆ.

ಈ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಗಳು-

ಕೋಟದಲ್ಲಿ ತಲವಾರು ದಾಳಿ: ಕ್ಷುಲ್ಲಕ ಕಾರಣಕ್ಕೆ ಹರಿಯಿತು ಇಬ್ಬರ ನೆತ್ತರು (Updated)

ಆಪ್ತಮಿತ್ರರಿಬ್ಬರ ಬರ್ಬರ ಕೊಲೆ ಪ್ರಕರಣ: ಕೋಟ ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ (Video)

ಟಾಯ್ಲೆಟ್ ಪಿಟ್ ನಿರ್ಮಾಣದ ತಕರಾರು: ಆಪ್ತ ಮಿತ್ರರಿಬ್ಬರ ಮೇಲೆ ತಲವಾರು ಬೀಸಿದ ಹಂತಕರು

ಕೋಟ ಆಪ್ತಮಿತ್ರರನ್ನು ಕೊಂದ ಕೊಲೆಗಾರರ ಪತ್ತೆಗೆ ಚುರುಕುಗೊಂಡ ತನಿಖೆ

ಕೋಟದಲ್ಲಿ ಸ್ನೇಹಿತರಿಬ್ಬರ ಮರ್ಡರ್ ಕೇಸ್: ಆರೋಪಿಗಳಿಗಾಗಿ ಮುಂದುವರಿದ ಶೋಧ

ಕೋಟ ಅವಳಿ ಕೊಲೆ: ಹರೀಶ್ ರೆಡ್ಡಿ ಸಹಚರರು ಇನ್ನೂ ಭೂಗತ!

ಇನ್ನೂ ಪತ್ತೆಯಾಗದ ಕೊಲೆಗಾರರು; ನ್ಯಾಯಕ್ಕಾಗಿ ಆಗ್ರಹಿಸಿ ಫೆ.3ಕ್ಕೆ ಕೋಟ ಬಂದ್

ಕೋಟದಲ್ಲಿ ಅವಳಿ ಕೊಲೆ ಪ್ರಕರಣ: ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಬಂದ್, ಪ್ರತಿಭಟನೆ (Video)

ಕೋಟ ಅವಳಿ ಕೊಲೆ ಪ್ರಕರಣದ ಆರೋಪಿಗಳ ಬಂಧನ? ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ ಅಂತೆಕಂತೆ!

ಕೋಟ ಡಬ್ಬಲ್ ಮರ್ಡರ್ ಕೇಸ್: ಇಬ್ಬರು ಆರೋಪಿಗಳ ಬಂಧನ

ಕೋಟ ಸ್ನೇಹಿತರ ಕೊಲೆಗೆ ಜಿ.ಪಂ ಸದಸ್ಯನೇ ಸೂತ್ರಧಾರಿ; ಪೊಲೀಸರಿಂದ 6 ಮಂದಿ ಬಂಧನ

ಕೋಟ ಅವಳಿ ಕೊಲೆಯ ಆರು ಆರೋಪಿಗಳಿಗೆ ಫೆ.15ರವರೆಗೆ ಪೊಲೀಸ್ ಕಸ್ಟಡಿ, ಮುಂದುವರಿಯಲಿದೆ ತನಿಖೆ

ಕೋಟ ಜೋಡಿ ಕೊಲೆ ಪ್ರಕರಣ ನಡೆದ ಮನೆಯಲ್ಲಿ ಮಹಜರು; ಕೃತ್ಯಕ್ಕೆ ಬಳಸಿದ್ದ 2 ಬೈಕ್ ವಶ

ಕೋಟ ಸ್ನೇಹಿತರಿಬ್ಬರ ಕೊಲೆ ಪ್ರಕರಣ: ರೆಡ್ಡಿಗೆ ಸಹಕರಿಸಿದ ಇಬ್ಬರು ಪೊಲೀಸರು ಅರೆಸ್ಟ್

ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿದ ಬಿಜೆಪಿಯವರಿಂದ ಕೊಲೆಗಡುಕರಿಗೆ ಬೆಂಬಲ: ಮಾಜಿ ಸಚಿವ ಸೊರಕೆ

ಕೋಟ ಸ್ನೇಹಿತರಿಬ್ಬರ ಕೊಲೆಯಲ್ಲಿ ಭಾಗಿಯಾದವನೂ ಸೇರಿ ಮತ್ತೆ ಐದು ಮಂದಿ ಬಂಧನ

ಕೋಟ ಜೋಡಿ ಕೊಲೆಗೆ ನ್ಯಾಯ ಕೇಳಿ ದೇವರ ಮೊರೆ ಹೋದವರಿಗೆ ಸಿಕ್ಕಿತು ಭರವಸೆಯ ನುಡಿ (Video

ಕೋಟ ಡಬಲ್ ಮರ್ಡರ್ ಕೇಸಿನ ಪ್ರಮುಖ ಆರೋಪಿ ಚಂದ್ರಶೇಖರ್ ರೆಡ್ಡಿ ಸಮೇತ ಇನ್ನೋರ್ವ ಬಂಧನ(Updated)

ಕೋಟ ಡಬಲ್ ಮರ್ಡರ್ ಕೇಸಿನ 16 ಆರೋಪಿಗಳು ನ್ಯಾಯಾಲಯಕ್ಕೆ ಹಾಜರು: ಇಬ್ಬರಿಗೆ ಪೊಲೀಸ್ ಕಸ್ಟಡಿ (Video)

ಕೋಟ ಡಬಲ್ ಮರ್ಡರ್ ಆರೋಪಿ ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್ ಬಿಜೆಪಿಯಿಂದ  ಅಮಾನತು

ಕೋಟ ಮರ್ಡರ್ ಕೇಸಿನ ಮೂವರು ಆರೋಪಿಗಳಿಗೆ ಜೈಲೋ? ಬೇಲೋ? ಫೆ.19 ಕ್ಕೆ ಆದೇಶ

ಕೋಟ ಮರ್ಡರ್ ಕೇಸಿನ ಮೂವರು ಆರೋಪಿಗಳಿಗೆ ಸದ್ಯ ಜೈಲೇ ಗತಿ; ಓರ್ವನಿಗೆ ಪೊಲೀಸ್ ಕಸ್ಟಡಿ

 

Comments are closed.