ಕರಾವಳಿ

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನಕ್ಕೆ ಭೇಟಿ

Pinterest LinkedIn Tumblr

ಮಂಗಳೂರು, ಮಾರ್ಚ್ 29 : ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ನಾಮಪತ್ರ ಪರಿಶೀಲನೆ ಮುಗಿದ ಬಳಿಕ ಅಭ್ಯರ್ಥಿಗಳ ಕ್ಷೇತ್ರ ದರ್ಶನ ಆರಂಭವಾಗಿದೆ. ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಪೈಪೋಟಿಯಲ್ಲಿ ಜಿಲ್ಲೆಯ ವಿವಿದ್ದ ದೇವಸ್ಥಾನಗಳಿಗೆ ಬೇಟಿ ನೀಡಿ ದೇವರ ದರ್ಶನ ಪಡೆಯುತ್ತಿರುವುದು ಕಂಡು ಬರುತ್ತಿದೆ.

ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಯವರು ಶುಕ್ರವಾರ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಅವರೊಂದಿಗೆ ಮಾಜಿ ಮೇಯರ್ ಕೆ.ಭಾಸ್ಕರ್ ಮೊಯ್ಲಿ , ಧಾರ್ಮಿಕ ಚಿಂತಕ ಪದ್ಮನಾಭ ಕೋಟ್ಯಾನ್, ಉದಯ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Comments are closed.