ಉಡುಪಿ: ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಆರೋಪಿ ಚಂದ್ರ ಹೆಮ್ಮಾಡಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಿ.ಎಂ.ಜೋಷಿ ಅವರು ತಿರಸ್ಕರಿಸಿದ್ದಾರೆ.
ಬೈಂದೂರು, ಕುಂದಾಪುರ ಗ್ರಾಮಾಂತರ, ಗಂಗೊಳ್ಳಿ ಸೇರಿದಂತೆ ವಿವಿಧ ಠಾಣಾ ವ್ಯಾಪ್ತಿಯ 21 ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿ ಚಂದ್ರ ಕೆ., ಮೊದಲ ಒಂದು ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಕೋರಿದ್ದ.
ದೇಶದಲ್ಲಿ ಪೋಕ್ಸೋ ಕಾಯಿದೆ ಜಾರಿಗೆ ಬಂದ ಅನಂತರ ಒರ್ವನೇ ಆರೋಪಿ ವಿರುದ್ಧ ಇಷ್ಟು ಸಂಖ್ಯೆಯಲ್ಲಿ ಪ್ರಕರಣ ದಾಖಲಾಗಿರುವುದು ಇತಿಹಾಸದಲ್ಲೇ ಮೊದಲು ಎನ್ನಲಾಗಿದೆ.
ಪ್ರಾಸಿಕ್ಯೂಶನ್ ಪರವಾಗಿ ಜಿಲ್ಲಾ ವಿಶೇಷ ಸರಕಾರಿ ಅಭಿಯೋಜಕ ವಿಜಯ ವಾಸು ಪೂಜಾರಿ ವಾದ ಮಂಡಿಸಿದ್ದರು.
Comments are closed.