ಕರಾವಳಿ

ಬಸ್ಸು ಮತ್ತು ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು

Pinterest LinkedIn Tumblr

ಉಡುಪಿ: ಇಂದು ಬೆಳಿಗ್ಗೆ ಒಂಬತ್ತು ಗಂಟೆಗೆ ಹೆಬ್ರಿ ಬಳಿಯ ಮುದ್ರಾಡಿಯ ಸುಬ್ಬಣ್ಣ ಕಟ್ಟೆ ಕ್ರಾಸ್ ನಲ್ಲಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ ಸವಾರ‌‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಉಡುಪಿ ಜಿಲ್ಲೆಯ ಹೆಬ್ರಿಯ ಮುದ್ರಾಡಿ ಬಳಿ ಬಸ್ಸು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ‌ ಬೈಕ್ ಸವಾರ ರಕ್ಷಣ್ ಆಚಾರ್ಯ (21) ಮುದ್ರಾಡಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಮುದ್ರಾಡಿಯ ನಿತ್ಯಾನಂದ ಆಚಾರ್ಯರ ಪುತ್ರ ರಕ್ಷಣ್‌ ಆಚಾರ್ಯ ಮರದ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Comments are closed.