ಮಂಗಳೂರು : ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಹ್ಯಾಟ್ರಿಕ್ ಗೆಲ್ಲಿಸಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸುವ ಅಂಗವಾಗಿ ಶುಕ್ರವಾರ ಕದ್ರಿ ಶ್ರೀ ಮಂಜುನಾಥೇಶ್ವರ ದೇವರ ಸನ್ನಿಧಾನದಲ್ಲಿ ವಿಶೇಷ ಪೂಜೆಯನ್ನು ಶಾಸಕ ಡಿ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಸಲ್ಲಿಸಲಾಯಿತು.
ಸಂಸದ ನಳೀನ್ ಕುಮಾರ್ ಕಟೀಲ್, ಮಾಜಿ ಶಾಸಕ ಎನ್ ಯೋಗೀಶ್ ಭಟ್, ಬಿಜೆಪಿ ಮುಖಂಡರಾದ ರೂಪಾ ಡಿ ಬಂಗೇರ,ಸಂಧ್ಯಾ ವೆಂಕಟೇಶ್, ವಸಂತ ಜೆ ಪೂಜಾರಿ, ರಮೇಶ್ ಕಂಡೆಟ್ಟು, ಭಾಸ್ಕರಚಂದ್ರ ಶೆಟ್ಟಿ, ಪೌಢ್ರಿಕ್ ಪೌಲ್, ರಾಮಚಂದ್ರ ರಾವ್, ನಿವೇದಿತಾ ಶೆಟ್ಟಿ, ದಯಾನಂದ ಶೆಟ್ಟಿ ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.
Comments are closed.