ಕರಾವಳಿ

ಜಯಕರ್ನಾಟಕ ಸಂಘಟನೆಯಿಂದ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ

Pinterest LinkedIn Tumblr

ಉಡುಪಿ: ಜಿಲ್ಲಾ ಜಯಕರ್ನಾಟಕ ಸಂಘಟನೆಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತಿಯನ್ನು ಬ್ರಹ್ಮಾವರದ ಧರ್ಮಾವರ ಆಡಿಟೋರಿಯಂನಲ್ಲಿ ಶುಕ್ರವಾರದಂದು ಆಚರಿಸಲಾಯಿತು. ಜಯಕರ್ನಾಟಕ ಸಂಘತನೆ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಅವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಗುರುಗಳ ಸಾರ್ವಕಾಲಿಕ ಸತ್ಯವಾದ ತತ್ವ ಸಿದ್ಧಾಂತವನ್ನು ಪಾಲಿಸುವಂತೆ ಕರೆ ನೀಡಿದರು.

ಜಿಲ್ಲಾ ಗೌರವ ಸಲಹೆಗಾರರಾದ ಸುಧಾಕರ ರಾವ್ ಬಾರ್ಕೂರು ಅವರು ನಾರಾಯಣ ಗುರುಗಳ ವಿಚಾರಧಾರೆಗಳ ಬಗ್ಗೆ, ಸಂಘಟನೆಯ ಸಮಾಜಮುಖಿ ಕಾರ್ಯಗಳಲ್ಲಿ ಗುರುಗಳ ತತ್ವವನ್ನು ಪಾಲಿಸಬೇಕು ಎಂದರು. ಗುರುಗಳು ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಳ ಬಗ್ಗೆ ವಿವರಿಸಿದರು.

ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಅಮೀನ್, ಹೋರಾಟ ಸಮಿತಿ ಅಧ್ಯಕ್ಷ ಕರುಣಾಕರ ಪೂಜಾರಿ, ಕಾರ್ಯಾಧ್ಯಕ್ಷ ಶರತ್ ಶೆಟ್ಟಿ ಕುಂದಾಪುರ, ಪ್ರಚಾರ ಸಮಿತಿ ಸಂಚಾಲಕ ವಿಶ್ವನಾಥ ಸುವರ್ಣ ವಾರಂಬಳ್ಳಿ, ರಾಘು ಶಂಕರಪುರ, ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು, ಉಪಸ್ಥಿತರಿದ್ದರು.

Comments are closed.