ಕರಾವಳಿ

ದ.ಕ.ಜಿಲ್ಲಾ ಪತ್ರಕರ್ತ ಸಂಘದಿಂದ ವನಮಹೋತ್ಸವ

Pinterest LinkedIn Tumblr

ಮಂಗಳೂರು, ಸೆಪ್ಟಂಬರ್.21 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಮತು ಅರಣ್ಯ ಇಲಾಖೆ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 21ರಂದು ಶನಿವಾರ ಬೆಳಗ್ಗೆ ನಗರದ ಲೇಡಿಹೀಲ್ ವೃತ್ತದ ಬಳಿ ನಡೆಯಿತು.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ವಿ. ಕರಿಕ್ಕಳನ್, ಮಂಗಳೂರು ವಲಯ ಅರಣ್ಯಾಧಿಕಾರಿ ಪಿ. ಶ್ರೀಧರ್ ತೋಟಗಾರಿಕ ಉಪನಿರ್ದೆಶಕ ಎಚ್. ಆರ್. ನಾಯ್ಕ್ ಅತಿಥಿಗಳಾಗಿ ಭಾಗವಹಿಸಿದ್ದರು.

ಮಾಜಿ ಮನಪಾ ಸದಸ್ಯ ರಾಧಾಕೃಷ್ಣ,  ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪಧಾಧಿಕಾರಿಗಳಾದ ಆರೀಫ್ ಪಡುಬಿದ್ರೆ, ಪುಷ್ಪರಾಜ್, ಹರೀಶ್ ಮೋಟುಕಾನ್, ಭಾಸ್ಕರ್ ಕಟ್ಟಾ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Comments are closed.