ಕರಾವಳಿ

ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ: ಸದಾನಂದ ಗೌಡ

Pinterest LinkedIn Tumblr

ಉಡುಪಿ: ಕರ್ನಾಟಕ ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಸರ್ಕಾರ ರಚನೆಯಾದ ದಿನದಿಂದ ಬಿಜೆಪಿಯು ಉಪ ಚುನಾವಣೆಗೆ ಕೆಲಸ ಶುರು ಮಾಡಿದೆ. ಲೋಕಸಭಾ ಚುನಾವಣಾ ಫಲಿತಾಂಶದ ಮೂಲಕ ಜನರು ಬಿಜೆಪಿಯನ್ನು ಒಪ್ಪಿಕೊಂಡಿರುವುದು ಎಲ್ಲರಿಗೂ ತಿಳಿದಿದೆ. ಉಪಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಉಡುಪಿಯಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಾಸಕರ ಅನರ್ಹತೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾಮಪತ್ರ ಸಲ್ಲಿಸಲು ಇನ್ನೂ ಹಲವು ದಿನ ಬಾಕಿ ಇದೆ. ಸೋಮವಾರ ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಯಲಿದೆ. ಒಂದೇ ದಿನದಲ್ಲಿ ಎಲ್ಲವೂ ಇತ್ಯರ್ಥ ಆಗಬಹುದು. ಕಾನೂನಿನ ಚೌಕಟ್ಟಿನಲ್ಲಿ ಶಾಸಕರಿಗೆ ಸಮಸ್ಯೆಗಳು ಆಗಿದೆ. ಅನರ್ಹತೆ ಹೊಂದಿದವರೇ ಮತ್ತೆ ಸ್ಪರ್ಧೆ ಮಾಡುವ ಅವಕಾಶ ಆಗುತ್ತದೆ. ಅನರ್ಹರು ಮೊದಲು ಬಿಜೆಪಿ ಸೇರುತ್ತಾರೆ. ಪಕ್ಷ ಆಮೇಲೆ ತೀರ್ಮಾನ ತೆಗೆದುಕೊಳ್ಳುತ್ತದೆ. ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದರೆ ಅವರು ಬಿಜೆಪಿಯಿಂದ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಿದ್ದಾರೆ.

Comments are closed.