ಕರಾವಳಿ

 ಕಾರ್ಮಿಕ ಕಾಲೋನಿ : 20 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ

Pinterest LinkedIn Tumblr

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾರ್ಮಿಕ ಕಾಲೋನಿಯಲ್ಲಿ ರಸ್ತೆ ಅಭಿವೃದ್ಧಿಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಮಂಗಳೂರು ಅಭಿವೃದ್ದಿಯತ್ತ ಸಾಗುತ್ತಿದೆ. ಕೇವಲ ನಗರ ಪ್ರದೇಶ ಮಾತ್ರವಲ್ಲದೆ ಒಳ ಪ್ರದೇಶಗಳನ್ನೂ ಗುರುತಿಸಿ ಅಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯ ಬಗ್ಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದೇನೆ. ಸಾರ್ವಜನಿಕರ ಬೇಡಿಗೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ.

ರಾಜ್ಯ ಸರಕಾರದ ಸಹಕಾರದೊಂದಿಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೊಳಿಸುವ ಮೂಲಕ ಅಭಿವೃದ್ಧಿಯ ಪಥದಲ್ಲಿ ಹೆಜ್ಜೆ ಹಾಕುತ್ತೇವೆ ಎಂದರು.ಕ್ಷೇತ್ರದ ಪ್ರಮುಖ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿಕೊಂಡಿದ್ದು ಅನುದಾನಗಳನ್ನು ಜೋಡಿಸಿ ಅದನ್ನು ಸಮರ್ಪಕವಾಗಿ ಕಾರ್ಯಗತಗೊಳಿಸಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.

ಈ ಸಂದರ್ಭದಲ್ಲಿ, ಬಿಜೆಪಿ ಮುಖಂಡರಾದ ರಮೇಶ್ ಕಂಡೆಟ್ಟು, ಭಾಸ್ಕರ್ ಚಂದ್ರ ಶೆಟ್ಟಿ, ಅಜಯ್ ಕುಮಾರ್, ವಸಂತ್ ಜೆ ಪೂಜಾರಿ, ರಾಮಚಂದ್ರ ಚೌಟ, ಕಿಶೋರ್ ಕೊಟ್ಟಾರಿ, ರಿತೇಶ್, ಹರೀಶ್ ರೈ, ದೇವಿ ಪ್ರಸಾದ್, ಸವಿತಾ ರೈ, ಉಮೇಶ್ ರೈ, ಶಿವರಾಮ್ ಭಂಡಾರಿ, ಅಶ್ವಿತ್ ಕೊಟ್ಟಾರಿ, ರವಿ ಕಕ್ಕೆಬೆಟ್ಟು, ಮೋಹನ್ ಶೆಟ್ಟಿ, ಮಾಕ್ಸಿ ಕಾರ್ಮಿಕ ಕಾಲೋನಿ, ಮುಖೇಶ್ ಕಾರ್ಮಿಕ ಕಾಲೋನಿ, ಮಾಜಿ ಮೇಯರ್ ಅಬ್ದುಲ್ ಲತೀಫ್ ಮುಂತಾದವರು ಉಪಸ್ಥಿತರಿದ್ದರು.

Comments are closed.