ಉಡುಪಿ: ನಗರದ ಹೋಲ್ಸೇಲ್ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ.ನಗದು ದೊಚಿದ ಘಟನೆ ಬುಧಾವಾರ ಬಂದಿದೆ. ಉಡುಪಿ ಮೈತ್ರಿ ಕಾಂಪ್ಲೆಕ್ಸ್ನ ತಳಮಹಡಿಯಲ್ಲಿ ಗುಟ್ಕಾ, ಸಿಗರೇಟ್ ಮಾರಾಟ ಮಾಡುವ ರಮಾ ಎಂಟರ್ಪ್ರೈಸ್( ಮಹಾದೇವಿ)ಹೋಲ್ ಸೇಲ್ ಅಂಗಡಿಯ ಶಟರ್ ಮುರಿದು ಕಳ್ಳರು ಡ್ರಾವರ್ ಅಲ್ಲಿದ್ದ 12 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.
ಕಳೆದ ಮೂರು ದಿನದಿಂದ ಬ್ಯಾಂಕ್ ರಜೆ ಇದ್ದ ಕಾರಣ ನಗದನ್ನು ಅಂಗಡಿ ಮಾಲಿಕ ರವೀಂದ್ರ ನಾಯಕ್ ಅವರು ಅಂಗಡಿಯಲ್ಲೇ ಇಟ್ಟಿದ್ದರು. ಈ ವಿಷಯ ತಿಳಿದವರೇ ಈ ಕೃತ್ಯ ನಡೆಸಿರಬಹುದೆಂದು ಅಂದಾಜಿಸಲಾಗಿದೆ. ಕಳವಿಗಾಗಿ ಕಬ್ಬಿಣದ ಸರಳುಗಳನ್ನು ಬಳಸಿದ್ದ ಕಳ್ಳರು ಅದನ್ನು ಗೋಣಿ ಚೀಲದಲ್ಲಿ ಸುತ್ತಿ ತಂದಿದ್ದು ಅಂಗಡಿಯ ಶಟರನ್ನು ಮುರಿದು ಒಳಹೋಗಿದ್ದರು. ಮತ್ತು ಹಣವಿದ್ದ ಡ್ರಾವರನ್ನೇ ಮಾತ್ರ ಮೀಟಿ ತೆಗೆದು ಹಣದೊಂದಿಗೆ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಉಡುಪಿ ಎಸ್ಪಿ ನಿಶಾ ಜೆಮ್ಸ್, ವೃತ್ತ ನಿರೀಕ್ಷಕ ಮಂಜುನಾಥ್, ಠಾಣಾಧಿಕಾರಿ ಅನಂತ ಪದ್ಮಾನಾಭ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದು ಪರೀಶಿಲನೆ ನಡೆಸುತ್ತಿದ್ದಾರೆ.
Comments are closed.