ಕರಾವಳಿ

ರಾಜ್ಯಾದ್ಯಂತ “ಸವರ್ಣದೀರ್ಘ ಸಂಧಿ” ಬಿಡುಗಡೆ : ಮಂಗಳೂರಿನ ಬಿಗ್ ಸಿನಿಮಾಸ್‌ನಲ್ಲಿ ಚಿತ್ರಕ್ಕೆ ಚಾಲನೆ

Pinterest LinkedIn Tumblr

ಮಂಗಳೂರು : ವೀರು ಟಾಕೀಸ್ ಹಾಗೂ ಶೈಲಾಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿ ನಿರ್ಮಾಣಗೊಂಡ ಖ್ಯಾತ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ನಿರ್ದೇಶಿಸಿ, ನಟಿಸಿರುವ “ಸವರ್ಣದೀರ್ಘ ಸಂಧಿ” ಕನ್ನಡ ಸಿನಿಮಾದ ಉದ್ಘಾಟನಾ ಸಮಾರಂಭ ಶುಕ್ರವಾರ ಮಂಗಳೂರಿನ ಬಿಗ್ ಸಿನಿಮಾಸ್‌ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಅಥಿತಿಗಳಾಗಿ ಪಾಲ್ಗೊಂಡಿದ್ದ ಖ್ಯಾತ ನಟ ನವೀನ್ ಡಿ.ಪಡೀಲ್ ಮಾತನಾಡಿ, ತುಳುನಾಡಿನ ಯಶಸ್ವಿ ನಿರ್ದೇಶಕ ಪ್ರಥಮ ಬಾರಿಗೆ ಕನ್ನಡದಲ್ಲಿ ವಿಭಿನ್ನ ರೀತಿಯ ಚಿತ್ರವನ್ನು ರಚಿಸಿ ನಿರ್ದೇಶಿಸಿದ್ದಾರೆ. ಹೊಸತನದಿಂದ ಕೂಡಿರುವ ಈ ಸಿನಿಮಾ ಸಿನಿಪ್ರೇಮಿಗಳ ಮನಗೆದ್ದು ಯಶಸ್ವಿಯಾಗಲಿ ಎಂದರು.

ಮಾತೋರ್ವ ಅಥಿತಿ ಖ್ಯಾತ ನಟ ಭೋಜರಾಜ್ ವಾಮಂಜೂರು ಮಾತನಾಡಿ, ಆರಂಭದಿಂದ ಅಂತ್ಯದವರೆಗೂ ವೈಶಿಷ್ಟ್ಯ ಹೊಂದಿರುವ ಚಿತ್ರ ಇದಾಗಿದೆ. ಯುವಕಲಾವಿದ ವಿರೇಂದ್ರ ಶೆಟ್ಟಿಯ ಕಲ್ಪನೆಯಲ್ಲಿ ಮೂಡಿದ ಸಿನಿಮಾ ಖಂಡಿತ ಜನಮನ ಗೆಲ್ಲುತ್ತದೆ ಎಂದರು.

ವಿಶೇಷ ಅಥಿತಿಗಳಾಗಿ ಆಗಮಿಸಿದ ನ್ಯಾಯವಾದಿ ಅರುಣ್ ಬಂಗೇರ ಶುಭ ಹಾರೈಸಿದರು. ನಿರ್ಮಾಪಕ ಲೂಷಿಂಗ್ಟನ್ ಥಾಮಸ್, ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ, ಬಿಗ್ ಸಿನಿಮಾಸ್‌ನ ಬಾಲಕೃಷ್ಣ ಶೆಟ್ಟಿ, ನಟರಾದ ಸುರೇಂದ್ರ ಬಂಟ್ವಾಳ, ಗಿರೀಶ್ ಶೆಟ್ಟಿ, ತಾರಾಕ್ಷಿ ವೀರೇಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ಬಿ.ರವೀಂದ್ರ ಶೆಟ್ಟಿ ನಿರೂಪಿಸಿದರು.

ವ್ಯಾಕರಣ ಕಾಮಿಡಿಯ ಚಿತ್ರ :

ಈ ಸಿನಿಮಾವು ವ್ಯಾಕರಣ ಕಾಮಿಡಿ ವಿಷಯವನ್ನು ಹೊಂದಿದೆ. ಹಿರಿಯ ನಟಿ ವಿನಯಪ್ರಸಾದ್ ಅವರ ಸಹೋದರನ ಮಗಳಾದ ಕೃಷ್ಣಾ ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಾಯಕಿಯಾಗಿ ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ.

ನಿರ್ದೇಶನ-ಕಥೆ-ಚಿತ್ರಕಥೆ-ಸಂಭಾಷಣೆ: ವೀರೇಂದ್ರ ಶೆಟ್ಟಿ ಕಾವೂರು. ಲುಷಿಂಗ್ಟನ್ ಥಾಮಸ್, ಹೇಮಂತ್ ಕುಮಾರ್ (ಪಿವಿಆರ್), ಮನೋಮೂರ್ತಿ, ವೀರೇಂದ್ರ ಶೆಟ್ಟಿ ಸೇರಿದಂತೆ ನಾಲ್ಕು ಜನ ನಿರ್ಮಾಪಕರನ್ನು ಹೊಂದಿರುವ ಈ ಸಿನಿಮಾಗೆ ಮನೋಮೂರ್ತಿ ಸಂಗೀತವಿದೆ. ಶಂಕರ್ ಮಹದೇವನ್, ಶ್ರೇಯಾ ಘೋಷಾಲ್ , ಶಶಿಕಲಾ ಸುನೀಲ್, ವಿಧಿಷಾ ವಿಶ್ವಾಸ್ ಹಿನ್ನೆಲೆ ಗಾಯನ ಈ ಚಿತ್ರಕ್ಕಿದೆ. ಉಸ್ತಾದ್ ಹೋಟೆಲ್ ಖ್ಯಾತಿಯ ಛಾಯಾಗ್ರಾಹಕ ಲೋಗನಾಥನ್ ಶ್ರೀನಿವಾಸನ್ ಕ್ಯಾಮಾರ ಈ ಸಿನಿಮಾಕ್ಕಿದೆ. ಸಂಕೇತ್ ಶಿವಪ್ಪ ಸಂಕಲನ ಮಾಡಿದ್ದಾರೆ.ಆನೇಕಲ್, ಜಿಗಣಿ, ದೇವರಾಯನ ದುರ್ಗಾ, ಮೂಡಿಗೆರೆ, ಮತ್ತು ಬೆಂಗಳೂರು ಆಸುಪಾಸು ಚಿತ್ರೀಕರಣ ನಡೆದಿದೆ.

ತಾರಾಗಣ: ವೀರೇಂದ್ರ ಶೆಟ್ಟಿ, ಕೃಷ್ಣಾ, ರವಿಭಟ್, ಕೃಷ್ಣ ನಾಡಿಗ್, ಪದ್ಮಜ ಸುರೇಂದ್ರ ಬಂಟ್ವಾಳ, ನಿರಂಜನ್ ದೇಶಪಾಂಡೆ, ರವಿ ಮಂಡ್ಯ, ಅಜಿತ್ ಹನಮಕ್ಕನವರ್ , ಅಲ್ವಿನ್ ಸಚಿನ್ ಡಿಸೋಜ, ಅವಿನಾಶ್ ನೀನಾಸಂ, ದತ್ತಾತ್ರೇಯ ಕುರಹಟ್ಟಿ, ರಾಮರಾವ್, ಸಂಕೇತ್ ಶಿವಪ್ಪ, ಪ್ರಣವ್ ಮೂರ್ತಿ, ಅಪ್ರಮೆಯ, ರಾಘು ಕಲಾವಿದ, ವಿಕ್ಕಿ, ಮಧುಸೂದನ್, ಮಧು ಭಾರದ್ವಾಜ್, ಎಲಿಜಬೆತ್ ಥಾಮಸ್ ಮುಂತಾದವರು ತಾರಾಗಣದಲ್ಲಿದ್ದಾರೆ.

Comments are closed.