ಉಡುಪಿ: ಉಡುಪಿ ಜಿಲ್ಲೆಯ ಕುಕ್ಕಿಕಟ್ಟೆ ರೈಲ್ವೆ ಸೇತುವೆ ಬಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಕಾರನ್ನು ನಿಲ್ಲಿಸದೇ ಪರಾರಿಯಾಗುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ಕಾರು ಚಾಲಕ ರಾಜೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಜಾನೆ ಕುಕ್ಕಿಕಟ್ಟೆ ರೈಲ್ವೆ ಸೇತುವೆ ಬಳಿ ಪಿಎಸ್ಐ ಅನಂತಪದ್ಮನಾಭ ಅವರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಅಲೆವೂರಿನಿಂದ ಬೀಡಿನಗುಡ್ಡೆ ಕಡೆಗೆ ಬರುತ್ತಿದ್ದ ಕಾರನ್ನು ತಡೆದು ನಿಲ್ಲಿಸಿದರೂ ಚಾಲಕ ರಾಜೇಶ್ ನಿಲ್ಲಿಸದೆ ಪರಾರಿಯಾಗಿದ್ದ. ಆತನನ್ನು ಹಿಂಬಾಲಿಸಿದ ಪೊಲೀಸರು ಡಯಾನ ಟಾಕೀಸ್ ಹತ್ತಿರ ಬರುತ್ತಿದ್ದಂತೆಯೇ ಹಿಡಿದು ತಪಾಸಣೆ ನಡೆಸಿ ರಾಜೇಶ್ನನ್ನು ಬಂಧಿಸಲಾಗಿದೆ ವಶಕ್ಕೆ ತೆಗದುಕೊಂಡಿದ್ದಾರೆ.
ಆರೋಪಿಯಿಂದ 13.560 ಗ್ರಾಂ ಚಿನ್ನಾಭರಣ, 2 ಮೊಬೈಲ್, 1 ಲ್ಯಾಪ್ ಟಾಪ್ ಸೇರಿ ಒಟ್ಟು 1,10,000 ಮೌಲ್ಯದ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಈ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.
Comments are closed.