ಉಡುಪಿ: ಉಡುಪಿ ಜಿಲ್ಲಾ ಪಂಚಾಯತಿನ ಸ್ಥಾಯಿ ಸಮಿತಿಯನ್ನು 3ನೇ ಅವಧಿಗೆ ಪುನರ್ ರಚಿಸಲಾಗಿದೆ.
ಸುಮಿತ್ ಶೆಟ್ಟಿ ಕೌಡೂರು ಇವರನ್ನು ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಪ್ರತಾಪ ಹೆಗ್ಡೆ ಮಾರಾಳಿ ಇವರನ್ನು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಾಗೂ ಶೋಭಾ ಜಿ. ಪುತ್ರನ್ ಇವರನ್ನು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.