ಕರಾವಳಿ

‘ಕ್ಯಾರ್’ ಚಂಡಮಾರುತ ಸಂಭವ: 2 ದಿನ ಮೀನುಗಾರಿಕೆಗೆ ತೆರಳದಂತೆ ಸೂಚನೆ

Pinterest LinkedIn Tumblr

ಉಡುಪಿ: ಕ್ಯಾರ್ ಚಂಡ ಮಾರುತವು ಅರಬ್ಭಿ ಸಮುದ್ರದಲ್ಲಿ ಪ್ರಭಾವ ಬೀರುವ ಸಾಧ್ಯತೆ ಇರುವ ಹಿನ್ನೆಲೆ ಸಂಭಾವ್ಯ ಅಪಾಯ ತಪ್ಪಿಸಲು ಎರಡು ದಿನಗಳ ಕಾಲ ಮೀನುಗಾರಿಕೆಗೆ ತೆರಳದಂತೆ ಕರಾವಳಿ ಕಾವಲು ಪೊಲೀಸ್ ಪಡೆಯ ಅಧೀಕ್ಷಕ ಆರ್.ಚೇತನ್ ಸೂಚಿಸಿದ್ದಾರೆ.

(ಸಾಂದರ್ಭಿಕ ಚಿತ್ರ)

ಅರಬ್ಬೀ ಸಮುದ್ರದಲ್ಲಿ ಮುಂದಿನ 48 ಗಂಟೆಗಳ ಕಾಲ ಸಮುದ್ರ ಪ್ರಕ್ಷುಬ್ಧಗೊಂಡು ಬಲವಾದ ಗಾಳಿ ಬೀಸಲಿದೆ. ದೊಡ್ಡ ಗಾತ್ರದ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ನೀಡಿದ ಸೂಚನೆಯ ಆಧಾರದ ಮೇಲೆ ಈ ಸೂಚನೆ ನೀಡಲಾಗಿದೆ.

Comments are closed.