ಕರಾವಳಿ

ಮಾಜಿ ಸಿಎಂ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಸಂಸದೆ ಶೋಭಾ

Pinterest LinkedIn Tumblr

ಉಡುಪಿ: ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಹೇಳಿದ ಸಿದ್ದರಾಮಯ್ಯ ಅವರ ಹೇಳಿಕೆಗೆ ಉಡುಪಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಅವರು ಸಮ್ಮಿಶ್ರ ಸರಕಾರ ಪತನದ ಬಳಿಕ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ಅನ್ನು ಬ್ಲ್ಯಾಕ್ ಮೇಲ್ ಮಾಡಿ ವಿಪಕ್ಷದ ನಾಯಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಸಿದ್ದರಾಮಯ್ಯ ಗೆ ಯಾವುದೇ ಹಿಡಿತ ಇಲ್ಲ , ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಬಣಗಳಾಗಿವೆ, ಸಿದ್ದರಾಮಯ್ಯ ಬಣ, ಜೆಡಿಎಸ್ ನಿಂದ ಬಂದವರ ಬಣ, ಪರಮೇಶ್ವರ್ ಬಣ, ಡಿ.ಕೆ.ಶಿ ದ್ದು ಬೇರೆಯೇ ಬಣ ಈ ಬಣಗಳನ್ನು ನಿಭಾಯಿಸಲಾಗದೆ ಬಾಯಿಗೆ ಬಂದದ್ದು ಮಾತಾಡ್ತಾರೆ , ಬಿಜೆಪಿ ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೆ ಏಕಾಂಗಿಯಾಗಿಯೇ ಉಪ ಚುನಾವಣೆಯನ್ನು ಗೆಲ್ಲುತ್ತೆ ಎಂದರು.

ರಾಜ್ಯದಲ್ಲಿ ಮೂರುವರೆ ವರ್ಷಗಳ ಕಾಲ ಬಿಜೆಪಿಯೇ ಆಡಳಿತ ಮಾಡುತ್ತೆ, ಜೆಡಿಎಸ್ ನವರು ಯಾರೂ ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ತಿಳಿಸಿದರು. ಅಲ್ಲದೆ ಸಿದ್ದರಾಮಯ್ಯ ಐದು ವರ್ಷದ ನಡವಳಿಕೆ ಜನ ನೋಡಿದ್ದಾರೆ. ಧರ್ಮವನ್ನು ಒಡೆಯುವ ಕೆಲಸ ಮಾಡಿದ್ದಾರೆ ,ಸಿದ್ದರಾಮಯ್ಯ ಕುತಂತ್ರ, ಷಡ್ಯಂತ್ರ ರಾಜ್ಯದ ಜನತೆಗೆ ಅರ್ಥವಾಗಿದೆ ಈ ಬಾರಿ ಯಾರೂ ಸಿದ್ದರಾಮಯ್ಯ ಕುತಂತ್ರಕ್ಕೆ ಬಲಿಯಾಗಲ್ಲ ಎಂದರು.

ಡಿಕೆ ಶಿವಕುಮಾರ್ ಇದ್ದಾಗಲೇ ವಿಧಾನಸಭಾ ಚುನಾವಣೆ ಆಗಿದೆ, ಡಿಕೆಶಿ ಮಂತ್ರಿಯಾಗಿದ್ದರೂ ವಿಧಾಸಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ ,ಡಿಕೆಶಿ ಪ್ರಭಾವ ಇದ್ರೂ 104 ಸ್ಥಾನ ಗೆದ್ದಿದ್ದೆವು ,ಕನಕಪುರದಲ್ಲಿ ಡಿಕೆಶಿ ಪ್ರಭಾವ ಇರಬಹುದು ಹಾಗಾಗಿ ಕನಕಪುರ ಗೆಲ್ಲೋದು ನಮಗೆ ಇವತ್ತಿಗೂ ಕಷ್ಟ ಎಂಬುದನ್ನು ಒಪ್ಪುತ್ತೇವೆ ,ಆದರೆ ಅದನ್ನು ಹೊರತು ಪಡಿಸಿ ರಾಜ್ಯದಲ್ಲಿ ಎಲ್ಲೂ ಡಿಕೆಶಿ ಪ್ರಭಾವ ಇಲ್ಲ ,ರಾಜ್ಯದ ಜನಕ್ಕೆ ಡಿಕೆಶಿ ಏನು ಅನ್ನೋದು ಅರ್ಥವಾಗಿದೆ ಎಂದರು.

Comments are closed.