ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಉಡುಪಿ ಪೊಲೀಸರು ಇಬ್ಬರು ಆರೋಪಿಗಳನ್ನು ಗಾಂಜಾ ಸಮೇತ ಬಂಧಿಸಿದ್ದಾರೆ. ಶಿವಮೊಗ್ಗ ಮೂಲದವರಾದ ಫೈರೋಜ್(20), ಮೊಹ್ಮದ್ ಮೊಸೀನ್ (20) ಬಂಧಿತ ಆರೋಪಿಗಳು.
ಉಡುಪಿ ಜಿಲ್ಲಾ ಎಸ್ಪಿ ನಿಶಾ ಜೇಮ್ಸ್ ರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರರವರ ಮಾರ್ಗದರ್ಶನದಲ್ಲಿ ಉಡುಪಿ ಉಪ ವಿಭಾಗದ ಡಿವೈಎಸ್ಪಿ ಟಿ.ಆರ್. ಜೈಶಂಕರ್ ಅವರು ಖಚಿತ ಮಾಹಿತಿ ಹಿನ್ನೆಲೆ ಡಿಸಿಐಬಿ ಸಿಬ್ಬಂದಿಯವರೊಂದಿಗೆ ಉಡುಪಿ ಪಂದುಬೆಟ್ಟು ಎಂಬಲ್ಲಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ದಾಳಿ ವೇಳೆ ಬಂಧಿತ ಆರೋಪಿಗಳಿಂದ 1.450 ಕೆ.ಜಿ ಗಾಂಜಾ, 2 ಮೊಬೈಲ್ ಫೋನ್, ಗಾಂಜಾ ತೂಕ ಮಾಡುವ ಮಿಷನ್, ನಗದು ಹಣ, ಪೌಚ್ ಸೇರಿದಂತೆ ಅಂದಾಜು 33 ಸಾವಿರ ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಡಿ.ವೈ.ಎಸ್.ಪಿ. ಜೈಶಂಕರ್ ಅವರಿಗೆ ಡಿ.ಸಿ.ಐ.ಬಿ ಘಟಕದ ಎಎಸ್ಐ ರವಿಚಂದ್ರ ಹಾಗೂ ಸಿಬ್ಬಂದಿಗಳಾದ ಸುರೇಶ, ಸಂತೋಷ ಕುಂದರ್, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ರಾಘವೇಂದ್ರ ಉಪ್ಪುಂದ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಪೂಜಾರಿ ಹಾಗೂ ಚಾಲಕ ಶಾಂತಾರಾಮ ಮೊದಲಾದವರು ಸಹಕಾರ ನೀಡಿದ್ದರು.
(ವರದಿ- ಯೋಗೀಶ್ ಕುಂಭಾಸಿ)
Comments are closed.