ಕರಾವಳಿ

ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಅವರ “ಜಬರ್‌ದಸ್ತ್ ಶಂಕರ” ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

Pinterest LinkedIn Tumblr

ಮಂಗಳೂರು :ಜಲನಿಧಿ ಫಿಲಂಸ್ ಲಾಂಛನದಲ್ಲಿ ತಯಾರಾದ ಅನಿಲ್ ಕುಮಾರ್, ಲೋಕೇಶ್ ಕೋಟ್ಯಾನ್, ರಾಜೇಶ್ ಕುಡ್ಲ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದ ಜಬರ್‌ದಸ್ತ್ ಶಂಕರ ತುಳು ಸಿನಿಮಾದ ಬಿಡುಗಡೆ ಸಮಾರಂಭವು ಶುಕ್ರವಾರ ಮಂಗಳೂರಿನ ಭಾರತ್ ಮಾಲ್‌ನ ಬಿಗ್ ಸಿನಿಮಾಸ್‌ನಲ್ಲಿ ನಡೆಯಿತು.

ಸಮಾರಂಭವನ್ನು ಮೂಡಾದ ಮಾಜೀ ಅಧ್ಯಕ್ಷ ಸುರೇಶ್ ಬಲ್ಲಾಳ್ ದೀಪ ಬೆಳಗಿಸಿ ಉದ್ಘಾಟಿಸಿದರು.ತುಳು ನಾಟಕ ರಂಗ ಮತ್ತು ತುಳು ಸಿನಿಮಾರಂಗ ಇಂದು ಉತ್ತುಂಗ ಮಟ್ಟದಲ್ಲಿದೆ. ಈ ಹಿಂದೆ ಕೆ.ಎನ್ ಟೇಲರ್ ಇಲ್ಲಿ ಅಧ್ವಿತೀಯ ಸಾಧನೆ ಮಾಡಿದ್ದಾರೆ. ಬಳಿಕ ದೇವದಾಸ್ ಕಾಪಿಕಾಡ್ ಅವರು ಮಾಡಿದ ಸಾಧನೆ ದೊಡ್ಡ ಮಟ್ಟದಲ್ಲಿದೆ. ಇವತ್ತು ನಾಟಕ, ಸಿನಿಮಾದ ಮೂಲಕ ತುಳು ಭಾಷೆಯನ್ನು ವಿಶ್ವದಲ್ಲೆಡೆ ಪಸರಿಸಿದ ಕೀರ್ತಿ ಕಾಪಿಕಾಡ್‌ರಿಗೆ ಸಲ್ಲುತ್ತದೆ ಎಂದವರು ತಿಳಿಸಿದರು.

ಬಿಗ್ ಸಿನಿಮಾಸ್‌ನ ಮುಖ್ಯಸ್ಥ ಬಾಲಕೃಷ್ಣ ಶೆಟ್ಟಿ ಸಿನಿಮಾಕ್ಕೆ ಶುಭ ಹಾರೈಸಿದರು. ಜಬರ್‌ದಸ್ತ್ ಶಂಕರ ಸಿನಿಮಾದ ನಿರ್ದೇಶಕ ದೇವದಾಸ್ ಕಾಪಿಕಾಡ್ ಪ್ರಸ್ತಾವಿಕವಾಗಿ ಮಾತನಾಡಿದರು. ಅರ್ಜುನ್ ಕಾಪಿಕಾಡ್ ನಾಯಕ ನಟನಾಗಿರುವ “ಜಬರದಸ್ತ್ ಶಂಕರ” ಪ್ರೇಕ್ಷಕರಲ್ಲಿ ಕುತೂಹಲ ಸೃಷ್ಟಿಸಿದೆ. ಸಾಮಾನ್ಯವಾಗಿ ತುಳು ಚಿತ್ರಗಳಲ್ಲಿ ಹಾಸ್ಯವೇ ಪ್ರಧಾನ ಆಗಿರುತ್ತದೆ. ದೇವದಾಸ್ ಕಾಪಿಕಾಡ್ ಅವರೇ ಕತೆ, ಚಿತ್ರಕತೆ, ಸಂಭಾಷಣೆ, ಹಾಡುಗಳನ್ನು ಬರೆದು ಚಿತ್ರ ನಿರ್ದೇಶನ ಮಾಡಿರುವಾಗ ಹಾಸ್ಯ ಇದ್ದೇ ಇರುತ್ತದೆ.ಆದರೆ, “ಜಬರದಸ್ತ್ ಶಂಕರ” ಕೇವಲ ಹಾಸ್ಯ ಚಿತ್ರವಾಗಿರದೆ ತುಳು ಚಿತ್ರರಂಗಕ್ಕೆ ಹೊಸ ಆಯಾಮ ನೀಡುವ ಮಹತ್ತರವಾದ ಪ್ರಯತ್ನವನ್ನು ಮಾಡಲಾಗಿದೆ. ತುಳು ಚಿತ್ರರಂಗ ಬೆಳೆಯಲಿ ಎಂದು “ಜಬರದಸ್ತ್ ಶಂಕರ” ಟೀಸರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ ಎಂದು ದೇವದಾಸ್ ಕಾಪಿಕಾಡ್ ತಿಳಿಸಿದರು.

ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ, ಹಿರಿಯ ರಂಗನಟಿ ಸರೋಜಿನಿ ಶೆಟ್ಟಿ, “ಜಬರ್‌ದಸ್ತ್ ಶಂಕರ” ಚಿತ್ರದ ನಿರ್ಮಾಪಕರಾದ ಅನಿಲ್ ಕುಮಾರ್, ಲೋಕೇಶ್ ಕೋಟ್ಯಾನ್, ರಾಜೇಶ್ ಕುಡ್ಲ, ಶರ್ಮಿಳಾ ಕಾಪಿಕಾಡ್, ಚಿತ್ರದ ನಾಯಕ ನಟ ಅರ್ಜುನ್ ಕಾಪಿಕಾಡ್, ನಟರಾದ ಸುರೇಂದ್ರ, ಸಾಯಿಕೃಷ್ಣ, ತಿಮ್ಮಪ್ಪ ಕುಲಾಲ್, ನೀತಾ ಅಶೋಕ್, ರಾಶಿ ಬಿ. ಗಿರೀಶ್ ಎಂ. ಶೆಟ್ಟಿ ಕಟೀಲು, ಸುನೀಲ್ ನೆಲ್ಲಿಗುಡ್ಡೆ, ಶರಣ್ ಕೈಕಂಬ, ಸುರೇಶ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು. ಲಕ್ಷ್ಮೀಶ್ ಕಾರ್ಯಕ್ರಮ ನಿರ್ವಹಿಸಿದರು.

ತಾರಾಗಣಃ ಅರ್ಜುನ್ ಕಾಪಿಕಾಡ್,ನೀತಾ ಅಶೋಕ್, ರಾಶಿ ಬಾಲಕೃಷ್ಣ, ಸಾಯಿ ಕೃಷ್ಣ ಕುಡ್ಲ, ದೇವದಾಸ್ ಕಾಪಿಕಾಡ್, ಶ್ರೀಕೃಷ್ಣ ಕುಡ್ಲ, ಗೋಪಿನಾಥ್ ಭಟ್, ಸತೀಶ್ ಬಂಡಾಲೆ, ಪ್ರತೀಕ್ ಶೆಟ್ಟಿ, ಮಿಮಿಕ್ರಿ ಶರಣ್, ಸುನೀಲ್ ನೆಲ್ಲಿಗುಡ್ಡೆ, ಲಕ್ಷ್ಮಣ್ ಮಲ್ಲೂರು, ಗೀರೀಶ್ ಶೆಟ್ಟಿ ಕಟೀಲ್, ಸರೋಜಿನಿ ಶೆಟ್ಟಿ, ತಿಮ್ಮಪ್ಪ ಕುಲಾಲ್ ಮತ್ತಿತರರು.

ರಾಜೇಶ್ ಕುಡ್ಲ ಕಾರ್ಯಕಾರಿ ನಿರ್ಮಾಪಕರಾಗಿದ್ದು, ತಾಂತ್ರಿಕ ವರ್ಗದಲ್ಲಿ ಛಾಯಾಗ್ರಾಹಣ ಸಿದ್ದು ಜಿಎಸ್ ಮತ್ತು ಉದಯ ಬಲ್ಲಾಳ್, ಸಂಕಲನ ಸುಜೀತ್ ನಾಯಕ್, ನೃತ್ಯ ಸಂಯೋಜನೆ ಸ್ಟಾರ್ ಗಿರಿ ಮತ್ತು ವಿನಾಯಕ ಆಚಾರ್ಯ, ಸಹ ನಿರ್ದೇಶನ ಪ್ರಶಾಂತ್ ಕಲ್ಲಡ್ಕ, ಕಲೆ ಕೇಶವ ಸುವರ್ಣ, ಕಾಸ್ಟ್ಯೂಮ್ ಶರತ್ ಪೂಜಾರಿ, ಮೇಕ್ ಅಪ್ ಮೋಹನ್, ಕೇಶಾಲಂಕಾರ ಮಮತಾ ಶೆಟ್ಟಿ ಮತ್ತು ಪಿಂಕಿ ಅಮೀನ್ ಮತ್ತಿತರರು. ಅರ್ಜುನ್ ಕಾಪಿಕಾಡ್ ಪ್ರಧಾನ ಸಹನಿರ್ದೇಶಕರಾಗಿ ಕೂಡ ಕೆಲಸ ಮಾಡಿದ್ದಾರೆ.

Comments are closed.