ಕರಾವಳಿ

ಉಡುಪಿ ಜಿಲ್ಲಾ ನ್ಯಾಯಾಧೀಶರ ಮನೆಗೆ ಕನ್ನ ಹಾಕಿ ಚಿನ್ನಾಭರಣ ಕದ್ದ ಖದೀಮರು!

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲಾ ಪ್ರಧಾನ ನ್ಯಾಯಾಧೀಶರ ಮನೆಯಲ್ಲೇ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳರು ಕಳವು ಮಾಡಿದ ಘಟನೆ ನಡೆದಿದೆ ಎಂದು ತಿಳಿದು ಬಂದಿದ

ಉಡುಪಿಯ ಅಜ್ಜರಕಾಡು ಕೃಷ್ಣಾನುಗೃಹ ವಸತಿ ಗೃಹದಲ್ಲಿ ಕಳೆದ ಆಗಸ್ಟ್ 11 ರಂದು ಮನೆಯ ಕಪಾಟಿನಲ್ಲಿ ಇಟ್ಟಿದ 138 ಗ್ರಾಂ ತೂಕದ ಚಿನ್ನಾಭರಣವನ್ನು ಕಳ್ಳರು ದೊಚಿದ್ದಾರೆ ಎನ್ನಲಾಗಿದೆ. ಒಡವೆಗಳನ್ನು ಬ್ಯಾಂಕ್ ಲಾಕರ್‌ನಲ್ಲಿ ಇಡಲು ಮನೆಯ ಕಪಾಟಿನಲ್ಲಿ ಇಟ್ಟಿದ್ದ ಆಭರಣ ನೋಡುವಾಗ ನಾಪತ್ತೆಯಾಗಿದೆಂದು ಜಿಲ್ಲಾ ಪ್ರಧಾನ ನ್ಯಾಯಾಧೀಶರಾದ ಸಿ. ಎಂ. ಜೋಶಿ ಅವರ ಪತ್ನಿ ಶೈಲಜಾ ಜೋಶಿ ಉಡುಪಿ ನಗರ ಠಾಣೆಗೆ ದೂರು ನೀಡಿದ್ದಾರೆ.ಆಗಸ್ಟ್11 ರಿಂದ ನವೆಂಬರ್ 28 ರ ಅವಧಿಯಲ್ಲಿ ಕಳ್ಳತನವಾಗಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ. ಕಳವುಗೈದ ಚಿನ್ನಾಭರಣದ ಮೌಲ್ಯ ರೂಪಾಯಿ 4,80,000 ಎಂದು ದೂರಿನಲ್ಲಿ ತಿಳಿಸಲಾಗಿದೆ.

ಉಡುಪಿ ಪೊಲೀಸರು ಕಳ್ಳತನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Comments are closed.