ಉಡುಪಿ: ಪೇಜಾವರ ಶ್ರೀಗಳ ಆರೋಗ್ಯ ಬಹಳಷ್ಟು ಕ್ಷೀಣಿಸಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಸ್ವಾಮೀಜಿಯವರ ಆರೋಗ್ಯ ಕ್ಷೀಣಿಸಿರುವ ಹಿನ್ನೆಲೆಯಲ್ಲಿ ಇಂದು (ಶನಿವಾರ) ಮತ್ತು ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉಡುಪಿಯಲ್ಲೇ ಉಳಿಯಲಿದ್ದಾರೆ. ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಶ್ವಾಸಕೋಶ ಉಸಿರಾಟ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಚಾರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿಲ್ಲ.ಕ್ಷಣ ಕ್ಷಣ ಅವರ ಆರೋಗ್ಯ ಸ್ಥಿತಿ ಕ್ಷೀಣವಾಗುತ್ತಿದೆ. ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು,ವೈದ್ಯರ ಪ್ರಯತ್ನ ಮುಂದುವರೆದಿದೆ. ಇವತ್ತು,ನಾಳೆ ಉಡುಪಿಯಲ್ಲೇ ಇರುತ್ತೇನೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಕ್ಷಣದಿಂದ ಕ್ಷಣ ಗಂಭೀರವಾಗುತ್ತಿದೆ ಎನ್ನಲಾಗಿದೆ. ಅವರ ಮಿದುಳು ಕೂಡ ನಿಷ್ಕ್ರೀಯಗೊಂಡಿದೆ ಎಂಬುದು ವೈದ್ಯರು ನೀಡಿದ ಇಂದಿನ ಸಂಜೆ ಹೆಲ್ತ್ ಬುಲೇಟಿನ್.
Comments are closed.