ಕರಾವಳಿ

ಆಸ್ಪತ್ರೆಗೆಂದು ತೆರಳಿದ್ದ ವ್ಯಕ್ತಿ ನಾಪತ್ತೆ- ಪೊಲೀಸರಿಗೆ ದೂರು

Pinterest LinkedIn Tumblr

ಉಡುಪಿ: ಆಸ್ಪತ್ರೆಗೆಂದು ಹೋದ ವ್ಯಕ್ತಿಯೊಬ್ಬರು ಕಣ್ಮರೆಯಾದ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ ತಾಲೂಕು ಬೆಳ್ಳಾಲ ಗ್ರಾಮದ ಹೊಸಮನೆ ಮುಡಮುಂದ ನಿವಾಸಿ ರಘುರಾಮ ಶೆಟ್ಟಿ (73) ಎಂಬುವವರು ಡಿ. 20 ರಂದು ಆರೋಗ್ಯ ಸರಿಯಿಲ್ಲದ ಕಾರಣ ಕುಂದಾಪುರ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಈವರೆಗೂ ಮನೆಗೆ ವಾಪಾಸ್ ಬಾರದೇ ಕಾಣೆಯಾಗಿದ್ದು, 5.5 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಹಿಂದಿ ಭಾಷೆ ಬಲ್ಲವರಾಗಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Comments are closed.