ಕರಾವಳಿ

ಮಂದರ್ತಿ ಶ್ರೀ ದುರ್ಗಾಪರಮೇಶ್ವರಿ ವಾರ್ಷಿಕ ಜಾತ್ರೆ – ಮದ್ಯ ಮಾರಾಟ ನಿಷೇಧ

Pinterest LinkedIn Tumblr

ಉಡುಪಿ: ಮಂದಾರ್ತಿ ಗ್ರಾಮದ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಫೆಬ್ರವರಿ 13 ರಿಂದ 15 ರ ವರೆಗೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ಜಾತ್ರೆ ಹಾಗೂ ಕೆಂಡ ಸೇವೆ ನಡೆಯುವ ಈ ಸಮಯದಲ್ಲಿ ಬಾರ್ ಮತ್ತು ವೈನ್‍ಶಾಪ್‍ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನ ಮಾಡಿ, ಗಲಭೆ ಮಾಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ, ಹೆಗ್ಗುಂಜೆ ಗ್ರಾಮ ಹಾಗೂ 33 ನೇ ಶಿರೂರು ಗ್ರಾಮದ ವ್ಯಾಪ್ತಿಯೊಳಗಿನ ಪ್ರದೇಶದಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್, ವೈನ್‍ಶಾಪ್‍ಗಳ ಮದ್ಯ ಮಾರಾಟವನ್ನು ಫೆಬ್ರವರಿ 13 ರ ಸಂಜೆ 6 ರಿಂದ ಫೆಬ್ರವರಿ 15 ರ ರಾತ್ರಿ 12 ಗಂಟೆಯವರೆಗೆ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಜಿ ಜಗದೀಶ್ ಆದೇಶ ಹೊರಡಿಸಿರುತ್ತಾರೆ.

Comments are closed.