ಕರಾವಳಿ

ಉಚ್ಚಿಲ ಸಮೀಪ ಭೀಕರ ರಸ್ತೆ ಅಪಘಾತ, ಲಾರಿ ಚಾಲಕ ಸ್ಥಳದಲ್ಲೇ ದಾರುಣ ಸಾವು

Pinterest LinkedIn Tumblr

ಉಡುಪಿ: ಕೆಟ್ಟು ನಿಂತಿದ್ದ ಲಾರಿಯೊಂದಕ್ಕೆ ವೇಗವಾಗಿ ಚಲಿಸಿ ಬಂದ ಲಾರಿ ಡಿಕ್ಕಿಹೊಡೆದ ಪರಿಣಾಮ ಲಾರಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ66ರ ಉಚ್ಚಿಲ ಹನಫಿ ಮಸೀದಿ ಬಳಿ ಮಂಗಳವಾರ ಮುಂಜಾನೆ ನಡೆದಿದೆ.

ಹುಬ್ಬಳ್ಳಿ ಕಡೆಯಿಂದ ಕಡಲೆ ಹಿಟ್ಟನ್ನು ಮಂಗಳೂರು ಕಡೆಗೆ ಸಾಗಿಸುತ್ತಿದ್ದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಹನಫಿ ಮಸೀದಿ ಬಳಿ ಕೆಟ್ಟು ನಿಂತಿತ್ತು. ಇದೇ ಸಂದರ್ಭದಲ್ಲಿ ಆ ಲಾರಿ ಚಾಲಕ ಕಲಘಟಗಿ ನಿವಾಸಿ ಮಹಂತೇಶ್ ಗೌಲಿ (33)ಎಂಬವರು ಲಾರಿ ಕೆಳಗಡೆ ಲಾರಿಯನ್ನು ರಿಪೇರಿ ಮಾಡುತ್ತಿದ್ದರು. ಇದೇ ವೇಳೆ ಉಡುಪಿ ಕಡೆಯಿಂದ ಮಂಗಳೂರಿನತ್ತ ನೀರುಳ್ಳಿ ಹೇರಿಕೊಂಡು ಅದೇ ದಾರಿಯಾಗಿ ಬರುತ್ತಿದ್ದ ಲಾರಿಯು ಕೆಟ್ಟು ನಿಂತ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಟ್ಟು ನಿಂತ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಫಘಾತದ ತೀವೃತೆಗೆ ಎರಡೂ ಲಾರಿಗಳು ಮಗುಚಿ ಬಿದ್ದು ನಜ್ಜು ಗುಜ್ಜಾಗಿದೆ. ಸ್ಥಳಕ್ಕೆ ಕೂಡಲೇ ಪಡುಬಿದ್ರಿ ಠಾಣಾಧಿಕಾರಿ ಸುಬಣ್ಣ ಮತ್ತು ಸಿಬ್ಬಂದಿ ಆಗಮಿಸಿದ್ದಾರೆ.

Comments are closed.