ಕರಾವಳಿ

ಏಪ್ರಿಲ್ 27 ರೊಳಗೆ ಪಡಿತರ ಪಡೆಯಿರಿ- ಜಿಲ್ಲಾಧಿಕಾರಿ ಜಿ.ಜಗದೀಶ್

Pinterest LinkedIn Tumblr

ಉಡುಪಿ: ಜಿಲ್ಲೆಯ ಪಡಿತರ ಚೀಟಿದಾರರ ಗಮನಕ್ಕೆ ಉಡುಪಿ ಡಿಸಿ ಪ್ರಕಟನೆಯೊಂದನ್ನು ನೀಡಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಮೇ 2020 ರ ಮಾಹೆಯಲ್ಲಿ, ಪ್ರಧಾನ ಮಂತ್ರಿ ಗರೀಬ್ ಅನ್ನ ಯೋಜನೆಯಡಿ, ಏಪ್ರಿಲ್ 2020 ಮತ್ತು ಮೇ 2020 ರ ಪಡಿತರವನ್ನು , ಏಪ್ರಿಲ್ 2020 ರ ಮಾಹೆಯ ಅಂತ್ಯದೊಳಗೆ ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಮಾಡಬೇಕಿರುವುದರಿಂದ , ಪಡಿತರ ಚೀಟಿದಾರರು ಏಪ್ರಿಲ್ 27 ರ ಒಳಗೆ , ಏಪ್ರಿಲ್ 2020 ರ ಪಡಿತರವನ್ನು ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

Comments are closed.