ಕರಾವಳಿ

ಕೋವಿಡ್-19: ಪಿಎಂ, ಸಿಎಂ ಪರಿಹಾರ ನಿಧಿಗೆ ತಲಾ 5 ಲಕ್ಷ ನೀಡಿದ ಉಡುಪಿಯ ದಾನಿ

Pinterest LinkedIn Tumblr

ಉಡುಪಿ: ಕೋವಿಡ್-19 ಕೋರೋನ ವೈರಸ್ ಎಂಬ ಈ ಮಹಾಮಾರಿ ದೇಶಾದ್ಯಂತ ವ್ಯಾಪಕವಾಗಿ ಹರಡಿದ್ದು ಮನುಕುಲಕ್ಕೆ ಸಂಕಷ್ಟವನ್ನು ಉಂಟುಮಾಡಿದೆ.  ಈ ನಿಟ್ಟಿನಲ್ಲಿ ಪರಿಹಾರ ಹಾಗೂ ಮುಂಜಾಗೃತ ಕ್ರಮಗಳು ಸಮರೋಪಾದಿಯಲ್ಲಿ ಸಾಗುತ್ತಿವೆ.

ಕೋರೋನ ವೈರಸ್ ಪ್ರಧಾನಮಂತ್ರಿ ಪರಿಹಾರ ನಿಧಿಗೆ 5,00,005 ಹಾಗೂ ಕೋರೋನ ವೈರಸ್ ಮುಖ್ಯಮಂತ್ರಿ ಪರಿಹಾರ ನಿಧಿಗೆ 5,00,005 ರೂಪಾಯಿ ಚೆಕ್ಕನ್ನು ದೇಣಿಗೆಯಾಗಿ ದಿನೇಶ್ ಭಟ್ ಇಂಡೇವರ್ ಸರ್ವಿಸಸ್ ಬ್ರಹ್ಮಾವರ ಇವರು ಉಡುಪಿ ಶಾಸಕ ಕೆ. ರಘುಪತಿ ಭಟ್ ಇವರ ಸಮ್ಮುಖದಲ್ಲಿ ಮಾನ್ಯ ಜಿಲ್ಲಾಧಿಕಾರಿ ಜಿ. ಜಗದೀಶ್ ರವರಿಗೆ ಹಸ್ತಾಂತರಿಸಿದರು.

ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಹಾಗೂ ಹಿರಿಯರಾದ ರಾಯಪ್ಪ ಪೈ ರವರು ಉಪಸ್ಥಿತರಿದ್ದರು. ಈ ಮಹತ್ತರ ಕೊಡುಗೆಗೆ ಶಾಸಕರಾದ ಕೆ ರಘುಪತಿ ಭಟ್ ಇವರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿ ವಿಶೇಷವಾದ ಅಭಿನಂದನೆಯನ್ನು ಸಲ್ಲಿಸಿದರು.

Comments are closed.