ಉಡುಪಿ: ಕೊರೋನಾದಿಂದ ವೃತ್ತಿ ಮೇಳಗಳ ಪ್ರದರ್ಶನ ಸ್ಥಗಿತಗೊಂಡಿದ್ದು, ಕಲಾವಿದರು ಸಂಕಷ್ಟದಲ್ಲಿರುವುದನ್ನು ಮನಗಂಡು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ವಿಶೇಷ ಆಸಕ್ತಿ ವಹಿಸಿ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಸುಮಾರು 40 ವೃತ್ತಿ ಮೇಳಗಳಲ್ಲಿ ದುಡಿಯುತ್ತಿರುವ 1800 ಕಲಾವಿದರಿಗೆ ಹಾಗೂ ಕಾರ್ಮಿಕ ವರ್ಗದವರಿಗೆ ಆಹಾರ ಸಾಮಾಗ್ರಿ ಕಿಟ್ ನೀಡುವ ವ್ಯವಸ್ಥೆ ಮಾಡಿದ್ದಾರೆ.

ಇದರ ಸಾಂಕೇತಿಕ ಹಸ್ತಾಂತರವನ್ನು ಮೇ 9, ಶನಿವಾರ ಪೂರ್ವಾಹ್ನ 10 ಗಂಟೆಗೆ ಕೊಲ್ಲೂರು ದೇವಳದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿರುವರು. ಇದರ ನಿರ್ವಹಣೆಯ ಹೊಣೆಗಾರಿಕೆಯನ್ನು ಉಡುಪಿಯ ಯಕ್ಷಗಾನ ಕಲಾರಂಗ ಸಂಸ್ಥಗೆ ನೀಡಲಾಗಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
Comments are closed.