ಕರಾವಳಿ

ಬಜಾಲ್ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಶಾಸಕ ಕಾಮತ್

Pinterest LinkedIn Tumblr

ಮಂಗಳೂರು : ಬಜಾಲ್ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಜಯನಗರ ಪರಿಸರದ ಜನರಿಗೆ ಹಿಂದೆ ನೀಡಿದ ವಾಗ್ದಾನದಂತೆ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದರು.

ಅವರು ಮಂಗಳೂರು ಮಹಾನಗರ ಪಾಲಿಕೆ ಬಜಾಲ್ ವಾರ್ಡಿನ ಜಯನಗರದ ಬಳಿ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ರೂ. 5 ಲಕ್ಷ ಅನುದಾನದಲ್ಲಿ ಚರಂಡಿ, ರಸ್ತೆ ಹಾಗೂ ತಡೆಗೋಡೆ ನಿರ್ಮಾಣವಾಗಲಿದೆ. ಶೀಘ್ರವೇ ಕಾಮಗಾರಿ ಪ್ರಾರಂಭಿಸಬೇಕೆಂದು ಗುತ್ತಿಗೆದಾರರಿಗೂ ಸೂಚನೆ ನೀಡಿದ್ದೇನೆ. ಈ ವಾರ್ಡಿನ ಅಭಿವೃದ್ಧಿಗೆ ಕಳೆದ ಎರಡು ವರ್ಷಗಳಲ್ಲಿ ಅತೀ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಗಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ವಿಶೇಷ ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಸ್ಥಳೀಯ ಪಾಲಿಕೆ ಸದಸ್ಯ ಅಶ್ರಫ್, ಬಿಜೆಪಿ ಮುಖಂಡರಾದ ಚಂದ್ರಶೇಖರ ಜಯನಗರ, ಶಿವಾಜಿ ರಾವ್,ವೇಣುಗೋಪಾಲ, ಪ್ರಸಾದ್ ಶೆಟ್ಟಿ, ಚರಿತ್ ಪೂಜಾರಿ, ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Comments are closed.