ಕರಾವಳಿ

ಹೂವಿನ ಬೆಳೆಗಾರರಿಗೆ ನಷ್ಟ ಪರಿಹಾರ : ಅರ್ಜಿ ಸಲ್ಲಿಕೆಗೆ ಜೂನ್ 29 ಕೊನೆಯ ದಿನ

Pinterest LinkedIn Tumblr

ಉಡುಪಿ: ಕೋವಿಡ್ 19 ಕಾರಣ ದೇಶದಲ್ಲಿ ವಿದಿಸಿರುವ ಲಾಕ್ ಡೌನ್ ನಿಂದ ಹೂವಿನ ಬೇಳೆಗಾರರಿಗೆ ಉಂಟಾದ ನಷ್ಟಕ್ಕೆ ಹೆಕ್ಟೇರ್ ರೂ 25,000,00 ಪರಿಹಾರವನ್ನು ಗರಿಷ್ಟ 1.00 ಹೆಕ್ಟೇರ್ ಗೆ 2019-20 ನೇ ಸಾಲಿನಲ್ಲಿ ಬೆಳೆ ಸಮೀಕ್ಷೆ ಮಾಹಿತಿಯ ಆಧಾರದಲ್ಲಿ ಪಾವತಿಸಲು ಸರ್ಕಾರ ರ ಸೂಚನೆಯಿದ್ದು, ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಹಾಗೂ ಇಲಾಖೆಯ ತಂತ್ರಾಶದಲ್ಲಿ ನೋಂದಣೆಯಾಗಿರುವ ಹಾಗೂ ನೊಂದಣೆಯಾಗದೆ ಇರುವ ರೈತರ ವಿವರವನ್ನು ಈಗಾಗಲೇ ಗ್ರಾಮ ಪಂಚಾಯತ್ ,ತಾಲೂಕು ಕಛೇರಿ ಹಾಗೂ ತೋಟಗಾರಿಕೆ ಇಲಾಖೆ ಕಛೇರಿಗಳಲ್ಲಿ ಪ್ರಕಟಿಸಿದೆ.

(File Photo)

ನೊಂದಣೆಯಾಗದೇ ಇರುವ ರೈತರಿಂದ ಆಧಾರ್ ಪ್ರತಿ,ಬ್ಯಾಂಕ್ ಪುಸ್ತಕದ ಪ್ರತಿ,ಹಾಗೂ ಮೊಬೈಲ್ ಸಂಖ್ಯೆಗಳನ್ನು ತಾಲೂಕು ತೋಟಗಾರಿಕೆ ಇಲಾಖಾ ಕಛೇರಿಗೆ ಒದಗಿಸಲು ಕೋರಲಾಗಿತ್ತು.ಈ ಮೂಲಕ ಜಿಲ್ಲೆಯ ರೈತರು ಬೆಳೆ ಸಮೀಕ್ಷೆಯಲ್ಲಿ ಪುಷ್ಪ ಬೆಳೆ ನಮೂದಾಗಿರುವ ಹಾಗೂ ಇಲಾಖೆಯ ತಂತ್ರಾಶದಲ್ಲಿ ನೋಂದಣೆಯಾಗದ ರೈತರು ಆಧಾರ್ ಪ್ರತಿ,ಬ್ಯಾಂಕ್ ಪುಸ್ತಕದ ಪ್ರತಿ,ಹಾಗೂ ಮೊಬೈಲ್ ಸಂಖ್ಯೆಯ ವಿವರಗಳನ್ನು ಸಂಬಂಧಿಸಿದ ತಾಲೂಕು ತೋಟಗಾರಿಕೆ ಕಚೇರಿಗೆ ಜೂನ್ 29 ರೊಳಗಾಗಿ ಸಲ್ಲಿಸಿ ಪರಿಹಾರವನ್ನು ಪಡೆಯಬೇಕಾಗಿ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ , ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ.), ಉಡುಪಿ ಜಿಲ್ಲೆ: 0820-2531950 , ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.), ಉಡುಪಿ ತಾಲೂಕು: 0820-2522837, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.),ಕುಂದಾಪುರ ತಾಲೂಕು: 08254-230813, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.), ಕಾರ್ಕಳ ತಾಲೂಕು: 08258-230288 ಅವರನ್ನು ಸಂಪರ್ಕಿಸುವಂತೆ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.